LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪ್ರಕೃತಿಯ ವರ್ಣನೆಗಳಿಂದ ಹಿಡಿದು ಸಾಮಾಜಿಕ ಪ್ರಜ್ಞೆಯ ವರ್ಣನೆಗೆ ಪ್ರಖ್ಯಾತಿ ಪಡೆದ ಮಹಾನ್ ಚೇತನ ದ.ರಾ.ಬೇಂದ್ರೆ: ಡಿ.ಶ್ರೀಕಾಂತ್

ದೊಡ್ಡಬಳ್ಳಾಪುರ: ವರಕವಿ ದ.ರಾ.ಬೇಂದ್ರೆ ಅವರು ಜನಸಾಮಾನ್ಯರ ನೋವು-ನಲಿವುಗಳನ್ನು, ಚೆಲುವು-ಒಲವುಗಳನ್ನು ತಮ್ಮ ಕವನಗಳಲ್ಲಿ ಮೂಡಿಸಿದರು. ಅವರಿಗೆ ಜೀವನವೇ ಕಾವ್ಯ, ಕಾವ್ಯವೇ ಜೀವನವಾಗಿತ್ತು ಎಂದು ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಾಲಯದಲ್ಲಿ ನಡೆದ ವರಕವಿ ದ.ರಾ.ಬೇಂದ್ರೆಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಭಾಷೆಯ ಪದ ಸಂಪತ್ತು ಮತ್ತು ನಾದ ಸಂಪತ್ತು ಎರಡನ್ನೂ ಬಳಸುವ ಮೂಲಕ ಬೇಂದ್ರೆಯವರ ತಮ್ಮ ಕಾವ್ಯಗುಣದ ಸತ್ವವನ್ನು ಉನ್ನತಮಟ್ಟಕ್ಕೆ ಏರಿಸಿದವರು. ಇಂದರಿಂದಾಗಿ ಬೇಂದ್ರೆಯವರ ಕವಿತೆಗಳು ಸಹೃದಯರ ಮನಸ್ಸನ್ನು ಆರ್ಕಷಣೆಗೊಳಿಸಿವೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ದ.ರಾ.ಬೇಂದ್ರೆ ಅವರು ಪ್ರಕೃತಿಯ ವರ್ಣನೆಗಳಿಂದ ಹಿಡಿದು ಸಾಮಾಜಿಕ ಪ್ರಜ್ಞೆಯ ವರ್ಣನೆಯ ತನಕ ಎಲ್ಲಾ ವಿಚಾರಗಳನ್ನು ಕವಿತೆಗಳಲ್ಲಿ ತಂದ ಮಹಾನ್ ಚೇತನ. ಶಬ್ದಗಾರುಡಿಗಾರ ಬೇಂದ್ರೆ ತಮ್ಮ ಕವಿತೆಗಳ ಮೂಲಕ ಹೊಸಗನ್ನಡ ಕಾವ್ಯಕ್ಕೆ ಹೊಸತನ ನೀಡಿದರು ಎಂದರು.

ನಾಗದಳ ಸಂಘಟನೆಯ ನಟರಾಜು ಮಾತನಾಡಿ, ಬೇಂದ್ರೆ ಅವರ ಕಾವ್ಯದಲ್ಲಿ ದೇಸಿ ಸೊಗಡು, ಪ್ರಕೃತಿ, ಆಧ್ಯಾತ್ಮಿಕತೆಯ ಜೊತೆಗೆ ಸಾಮಾನ್ಯ ಮನುಷ್ಯ ಜೀವನದ ಸಾಮಾಜಿಕ ವ್ಯವಸ್ಥೆಯ ವಿವಿಧ ಆಯಾಮಗಳನ್ನು ತಮ್ಮ ಕಾವ್ಯದ ಮೂಲಕ ಬಿಂಬಿಸಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ ನಾಗರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.
ಗೋವಿಂದರಾಜು, ಕಸಬಾ ಹೋಬಳಿ ಘಟಕ ಅಧ್ಯಕ್ಷದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಷಪೀರ್, ಕೋದಂಡರಾಮ್, ಎ.ಅಣ್ಣಯ್ಯ, ಕಲಾವಿದರುಗಳಾದ ದರ್ಗಾಜೋಗಿ ಹಳ್ಳಿ ಮಲ್ಲೇಶ್, ಎಂ.ರಾಮಕೃಷ್ಣ, ಪತ್ರಕರ್ತ ಮಂಜುನಾಥ ಮೊದಲಾದವರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು