LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪ್ರತಿ ವರ್ಷ ಸಂಗಿತೋತ್ಸವಕ್ಕೆ ದಂಪತಿ ಸಮೇತ ಬರುತ್ತಿದ್ದರು: ಶರಣ ಪ್ರಕಾಶ್ ಪಾಟೀಲ್ ಸಂತಾಪ

ಬೆಂಗಳೂರು: ಕರ್ನಾಟಕದ ಮುತ್ಸದ್ಧಿ ರಾಜಕಾರಣಿ, ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಎಂಬ ಶ್ರೇಯಸ್ಸು ದೊರೆಯುವಂತೆ ಮಾಡಿದ ನಾಡು ಕಂಡ ಧೀಮಂತ ರಾಜಕಾರಣಿ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್  ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರ ನಿಧನ ಸುದ್ದಿ ತಿಳಿದು ಅತೀವ ದುಃಖವಾಯಿತು. ಸಚಿವರು, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಹಾಗೂ ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಸಮರ್ಥವಾಗಿ ನಿಭಾಯಿಸಿದ್ದಾರೆ. ಕರ್ನಾಟಕದಲ್ಲಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ನೀಡಿರುವ ಕೊಡುಗೆ ಸದಾ ಸ್ಮರಣೀಯ ಎಂದು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಲವಾರು ಸಂದರ್ಭದಲ್ಲಿ ಅವರ ಮಾರ್ಗದರ್ಶನವನ್ನು ನಾನು ಪಡೆದಿದ್ದೇನೆ. ಕೃಷ್ಣ ಅವರು ಶಾಸ್ತ್ರೀಯ ಸಂಗೀತಾಸ್ತಕರಾಗಿದ್ದರು. ಪ್ರತಿ ವರ್ಷ ಚಾಮರಾಜಪೇಟೆಯಲ್ಲಿ ನಡೆಯುತ್ತಿದ್ದ ಸಂಗೀತೋತ್ಸವಕ್ಕೆ ದಂಪತಿ ಸಮೇತ ಬಂದು ಸಂಗೀತ ಆಲಿಸುತ್ತಿದ್ದರು. ಲಾನ್ ಟೆನಿಸ್ ಬಗ್ಗೆ ವಿಶೇಷ ವ್ಯಾಮೋಹ ಹೊಂದಿದ್ದ ಕೃಷ್ಣ ಅವರು ಬ್ಯಾಡ್ಮಿಂಟನ್ ಪ್ರಿಯರಾಗಿದ್ದು, ಪ್ರತಿ ದಿನವೂ ಆಡುತ್ತಿದ್ದುದು ಕಂಡಿದ್ದೇವೆ ಎಂದು ಸ್ಪರಿಸಿದರು.

ಎಸ್.ಎಂ.ಕೃಷ್ಣ ಅವರ ನಿಧನದಿಂದ ವೈಯಕ್ತಿಕವಾಗಿ ಅಪಾರ ದುಃಖವಾಗಿದೆ. ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗದವರಿಗೆ, ಬಂಧು-ಬಳಗದವರಿಗೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು