LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪ್ರವಾಹದ ಎಚ್ಚರಿಕೆ ರಾಷ್ಟ್ರ ಮತ್ತು ರಾಜ್ಯದಲ್ಲಿ ತೀವ್ರ ಮಳೆಯಾಗುವ ಮುನ್ಸೂಚನೆ

ನವದೆಹಲಿ/ಮಂಗಳೂರು: ವಾಯುವ್ಯ ಮತ್ತು ಪೂರ್ವ ಭಾರತ, ಈಶಾನ್ಯ ಪ್ರದೇಶ, ಪಶ್ಚಿಮ ಘಟ್ಟಗಳು ಮತ್ತು ಗುಜರಾತ್‍ನಲ್ಲಿ ವ್ಯಾಪಕವಾದ ತೀವ್ರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಪ್ರಬಲ ಮಾನ್ಸೂನ್ ನಿಂದಾಗಿ ಮುಂದಿನ 24 ಗಂಟೆಗಳಲ್ಲಿ ಹಠಾತ್ ಪ್ರವಾಹ ಉಂಟಾಗಬಹುದು ಎಂದು ಎಚ್ಚರಿಕೆ ನೀಡಿದೆ.

ಇದರ ಜೊತೆಗೆ, ಮುಂದಿನ 4-5 ದಿನಗಳಲ್ಲಿ ವಾಯುವ್ಯ ಪ್ರದೇಶಗಳು, ಪೂರ್ವ ಮತ್ತು ಈಶಾನ್ಯ ಪ್ರದೇಶಗಳಲ್ಲಿ ಪ್ರತ್ಯೇಕವಾದ ಅತ್ಯಂತ ಭಾರೀ ಮಳೆಯಾಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ ಕೆಲವು ದಿನಗಳವರೆಗೆ ಉತ್ತರಾಖಂಡ, ಈಶಾನ್ಯ ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ನದಿಯ ಜಲಾನಯನ ಪ್ರದೇಶಗಳಲ್ಲಿ ಸ್ಥಳೀಯ ಪ್ರವಾಹಗಳು ಮತ್ತು ಭೂಕುಸಿತ ಉಂಟಾಗುವ ಸಾಧ್ಯತೆಯಿದೆ. ಜನರು ಜಲಮೂಲಗಳಿಂದ ಆದಷ್ಟು ದೂರವಿದ್ದರೆ ಉತ್ತಮ. ಸಿಕ್ಕಿಂ, ಹಿಮಾಲಯ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಉತ್ತರ ಪ್ರದೇಶವನ್ನು ಒಳಗೊಂಡಿರುವ ಪೂರ್ವ ಪ್ರದೇಶದಲ್ಲಿ ಮಧ್ಯಮ ಪ್ರಮಾಣದಿಂದ ಹೆಚ್ಚಿನ ಪ್ರವಾಹ ಉಂಟಾಗಲಿದೆ.

ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ರಾಜಸ್ಥಾನದ ಪೂರ್ವ ಭಾಗಗಳು, ದಕ್ಷಿಣ ಪ್ರದೇಶ ಪಶ್ಚಿಮ ಘಟ್ಟಗಳು ಮತ್ತು ಪಶ್ಚಿಮ ಪ್ರದೇಶ ಕೊಂಕಣ ಮತ್ತು ಗುಜರಾತ್‍ನ ಕೆಲವು ಜಲಾನಯನ ಪ್ರದೇಶಗಳು ಮತ್ತು ನೆರೆಹೊರೆಗಳಲ್ಲಿ ಕಡಿಮೆಯಿಂದ ಮಧ್ಯಮ ಪ್ರಮಾಣದಲ್ಲಿ ಪ್ರವಾಹದ ಅಪಾಯವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಕರಾವಳಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಇಂದು ಶನಿವಾರ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ, ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಸಂಭಾವ್ಯ ಪ್ರವಾಹ ಮತ್ತು ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಜನರು ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ, ತುರ್ತು ಸೇವೆಗಳಿಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ-1077 ಅಥವಾ ದೂರವಾಣಿ ಸಂಖ್ಯೆ 0824-2442590ಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು