LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ:ಜಿ. ಪರಮೇಶ್ವರ

ಬೆಂಗಳೂರು: ಗುತ್ತಿಗೆದಾರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ.‌ ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ ಎಂದು ಹೇಳಿದರು.

ತನಿಖೆಯ ವರದಿ ಬಂದ ನಂತರ ಏನು‌ ಎಂಬುದನ್ನು ಹೇಳೋಣ. ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅನವಶ್ಯಕವಾಗಿ ಅವರ ಹೆಸರನ್ನು ತೆಗೆದುಕೊಂಡು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದರು

ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಕರಣಗಳನ್ನು ಸಿಬಿಐಗೆ ವಹಿಸಲು ಆಗುವುದಿಲ್ಲ. ಸಿಐಡಿ ಸಮರ್ಥವಾಗಿದೆ.‌ ಅನೇಕ ಪ್ರಕರಣಗಳಲ್ಲಿ ಸಿಐಡಿ ತನಿಖೆಯ ವರದಿ ಬಂದಿದೆಯಲ್ಲವೇ? ಬಿಜೆಪಿಯವರು ಹೇಳಿದ್ದೆಲ್ಲ ಕೇಳುವುದಿಲ್ಲ. ಸಕರಾತ್ಮಕವಾಗಿ ಸಲಹೆ, ಸೂಚನೆ ನೀಡಿದರೆ ಕೇಳುತ್ತೇವೆ. ಅನವಶ್ಯಕವಾಗಿ ಎಲ್ಲದರಲ್ಲು ರಾಜಕೀಯ ಮಾಡಲು ಹೋದರೆ ಕೇಳುವುದಿಲ್ಲ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ ಶಾಸಕ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಲ್ಲವೇ. ಈ ನಿಟ್ಟಿನಲ್ಲಿ ಸಿಐಡಿ ಅವರು ತಮ್ಮ‌ ಕೆಲಸವನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಹೊಸ ವರ್ಷದ ಸಂತೋಷವನ್ನು ಹಂಚಿಕೊಳ್ಳಬೇಕು. ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾರಿಗೂ ತೊಂದರೆಯಾಗದಂತೆ ಹೊಸ ವರ್ಷ ಆಚರಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು