LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬೀದರ್ ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಳೆ ಪ್ರತಿಭಟನೆ ನಡೆಸಲಿದೆ. ಗುತ್ತಿಗೆದಾರನ ಆತ್ಮಹತ್ಯೆಗೂ, ಖರ್ಗೆ ಅವರ ಕಚೇರಿಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿದ್ದು, ಸಚಿವರ ತವರು ಜಿಲ್ಲೆ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಿದೆ.

ಈ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ನಾನು ಅವರನ್ನು ಸ್ವಾಗತಿಸುತ್ತೇನೆ, ಅವರಿಗೆ ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತೇವೆ. ಅವರು ಸರಿಯಾಗಿ ನಡೆದುಕೊಂಡರೆ ನೀರು ಮತ್ತು ಎಳನೀರು ನೀಡುತ್ತೇವೆ. ಅನುಚಿತವಾಗಿ ವರ್ತಿಸಿದರೆ ಜೈಲಿಗೆ ಕಳುಹಿಸುತ್ತೇವೆ. ಪ್ರತಿಭಟನಾಕಾರರು ಹೇಗೆ ವರ್ತಿಸುತ್ತಾರೆ ಎಂಬುದರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಬಿಜೆಪಿಯ ಕಾರ್ಯವೈಖರಿಯನ್ನು ಟೀಕಿಸಿದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್, ಬಿಜೆಪಿಗೆ ಬೇರೆ ಕೆಲಸವಿಲ್ಲ. ಪ್ರತಿಪಕ್ಷವಾಗಿ ಸಾರ್ವಜನಿಕ ಸಮಸ್ಯೆಗಳನ್ನು ಎತ್ತಿ ಹಿಡಿಯುವಲ್ಲಿ ವಿಫಲರಾಗಿದೆ. ಬಿಜೆಪಿಯ ತಪ್ಪುಗಳನ್ನು ಎತ್ತಿ ತೋರಿಸಿದ್ದಕ್ಕೆ ಪ್ರಿಯಾಂಕ್ ಖರ್ಗೆ ಮೇಲೆ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಖರ್ಗೆಗೂ, ಇದಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಪ್ರತಿಭಟನೆ ಮಾಡಬಹುದು ಎಂದಿದ್ದಾರೆ.

ಇದೇ ವೇಳೆ ಬಿಜೆಪಿಯ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, 'ಬಿಜೆಪಿಯವರು ಮಾಡೋದು ಇದೊಂದೇ. ಗುತ್ತಿಗೆದಾರನ ಆತ್ಮಹತ್ಯೆ ತುಂಬಾ ದುಃಖಕರ. ಆದರೆ ಅದರಲ್ಲಿ ಪ್ರಿಯಾಂಕ್ ಖರ್ಗೆ ಯಾವ ರೀತಿಯಲ್ಲಿ ಶಾಮೀಲಾಗಿದ್ದಾರೆ? ದಿನಕ್ಕೊಂದು ರೈಲ್ವೆ ಅಪಘಾತಗಳು ನಡೆಯುತ್ತಿವೆ. ಇದಕ್ಕೆ ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡಬೇಕೇ?. ಬಿಜೆಪಿಯವರು ಈ ಪ್ರಕರಣವನ್ನು ರಾಜಕೀಯವಾಗಿ ತೆಗೆದುಕೊಂಡಿದ್ದಾರೆ. ನಾವು ಅವರನ್ನು (ಪ್ರತಿಭಟನಕಾರರನ್ನು) ಖಂಡಿತವಾಗಿ ಸ್ವಾಗತಿಸುತ್ತೇವೆ ಎಂದರು.

ಬೀದರ್‌ನ 26 ವರ್ಷದ ಗುತ್ತಿಗೆದಾರ ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ ರಾಜು ಕಾಪನೂರ ಅವರ ಕಿರುಕುಳ ಮತ್ತು ಬೆದರಿಕೆ ಬಗ್ಗೆ ಡೆತ್‌ನೋಟ್‌ನಲ್ಲಿ ಹೇಳಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪಟ್ಟು ಹಿಡಿದಿದೆ. ಆದರೆ, ಪ್ರಿಯಾಂಕ್ ಖರ್ಗೆ, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಗುತ್ತಿಗೆದಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಹಣಕಾಸಿನ ತೊಂದರೆ ಮತ್ತು ಒತ್ತಡದಿಂದ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು