LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಹೋರಾಟ ತೀವ್ರ

ಬೆಂಗಳೂರು: ಬೀದರ್ ಗುತ್ತಿಗೆದಾರರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮತ್ತಷ್ಟು ತೀವ್ರಗೊಳಿಸಿದೆ. ಬೆಂಗಳೂರಿನ ರೇಸ್‌ ಕೋರ್ಸ್ ರಸ್ತೆಯಲ್ಲಿ ಬಿಜೆಪಿ ನಾಯಕರು ಪೋಸ್ಟರ್ ಅಭಿಯಾನ ನಡೆಸಿದರು.

ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ ಹಾಗೂ ರವಿಕುಮಾರ್ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗುತ್ತಿಗೆದಾರ ಸಚಿವ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಹೊಣೆಗಾರರು ಎಂದು ಘೋಷಣೆ ಕೂಗಿದರು. ಕೈಲಿದ್ದ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದರು.

ಇದೊಂದು ಭ್ರಷ್ಟ ಸರ್ಕಾರ. ಏನೇ ಮಾಡಿದರೂ ತಮ್ಮನ್ನು ಯಾರು ಕೇಳುವುದಿಲ್ಲ ಎಂದುಕೊಂಡಿದ್ದಾರೆ. ಗುತ್ತಿಗೆದಾರರನ ಡೆತ್‌ನೋಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತರ ಹೆಸರು ಇದೆ. ಇದಕ್ಕೆ ಸಚಿವರೇ ಜವಾಬ್ದಾರರು ಎಂದು ಬಿಜೆಪಿ ನಾಯಕರು ಸಚಿವ 'ಪ್ರಿಯಾಂಕ್ ಖರ್ಗೆ ಸುಪಾರಿ ಸ್ಪಾನ್ಸರ್' ಎಂಬ ಪೋಸ್ಟರ್‌ ಅನ್ನು ವಿವಿಧೆಡೆ ಗೋಡೆಗಳಿಗೆ ಅಂಟಿಸಿದರು. ಸಚಿವರು ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದರು.

ಸೂಸೈಡ್ ಹಾಗೂ ಸುಪಾರಿ ಭಾಗ್ಯ ನೀಡಿದ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂಬ ಪೋಸ್ಟರ್‌ಗಳನ್ನು ಅಂಟಿಸಿ, ಕೈ ಹಿಡಿದು ಬಿಜೆಪಿ ಕಾಯರ್ತರು ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ಹಿಂದೆ ನಡೆದಿದ್ದ ಕೆಲವು ಘಟನೆಗಳನ್ನು ವಿವರಿಸಿದ ಸಚಿವರಾದ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ನಾಗೇಂದ್ರ ಮತ್ತು ಶಾಸಕ ಚೆನ್ನಾರೆಡ್ಡಿ ಅವರ ಫೋಟೋ ಪೋಸ್ಟರ್ ಮಾಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಹತ್ಯೆ. ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಬರೆದಿಟ್ಟರೂ, ಪ್ರಿಯಾಂಕ್‌ ಖರ್ಗೆ ಅವರ ಆಪ್ತ, ಕೊಲೆಗಾರ ರಾಜು ಕಪನೂರನ್ನು ಬಂಧಿಸದಿರುವುದು ಈ ಕೊಲೆಯಲ್ಲಿ ಕಾಂಗ್ರೆಸ್ ಸರ್ಕಾರ ಭಾಗಿಯಾಗಿದೆ ಎಂಬುದಕ್ಕೆ ಸಾಕ್ಷಿ. ಸಿಎಂ ಸಿದ್ದರಾಮಯ್ಯನರೇ ಕೊಲೆಗಡುಕ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ.

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಗುತ್ತಿಗೆದಾರ ಸಚಿನ್ ಅವರ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು