LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಬಿಪಿಎಲ್ ಪಡಿತರ ಚೀಟಿ ಪಡೆಯಲು ಇರುವ ಮಾನದಂಡಗಳು

ದೇವನಹಳ್ಳಿ: ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ರವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಸದನದಲ್ಲಿ ಉತ್ತರವನ್ನು ನೀಡಿದರು.ಬಿಪಿಎಲ್ ಪಡಿತರ ಚೀಟಿ ಪಡೆಯಲು ಇರುವ ಮಾನದಂಡಗಳೇನು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾನದಂಡದಡಿ ಬಿಪಿಎಲ್ ಪಡಿತರ ಚೀಟಿ ರದ್ದು ಪಡಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ 2017 ರಲ್ಲಿ ಹೊರಗಿಡುವ ಮಾನದಂಡಗಳನ್ನು ರೂಪಿಸಿದೆ.ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು /ನಿಗಮಗಳು/ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ಸೇವಾ ತೆರಿಗೆ/ ಜಿಎಸ್ಟಿ/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.

ಗ್ರಾಮೀಣ ಪ್ರದೇಶಗಳಲ್ಲಿ 03 ಹೆಕ್ಟರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
ಜೀವನೋಪಾಯಕ್ಕಾಗಿ ಸ್ವತಃ ಒಂದು ಒಡಿಸುವ ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು. ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.

ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾವುದೇ ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿಗಳನ್ನು ರದ್ದುಆರೋಗ್ಯಕ್ಕೆ ಸಂಭಂದಿಸಿದ ಕಾರ್ಡ್ ಅನ್ನು ಆಯಾ ಜಿಲ್ಲೆಯಲ್ಲಿ ಸಂಭಂದಿಸಿದ ಅಧಿಕಾರಿಗಳು ನೀಡುತ್ತಾರೆ.

ಯಾವುದೇ ಅನಗತ್ಯ ಗೊಂದಲ ಬೇಡ ನಾವು ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ಕಾರ್ಡ್‍ಗಳನ್ನು ಪರಿಷ್ಕರಣೆ ಮಾಡಿದಾಗ ಕೆಲವು ಗೊಂದಲ
ಗಳಿಂದ ಏರು ಪೇರಾಯಿತು ಅದನ್ನು ತಕ್ಷಣ ರೀ ಸ್ಟೋರ್ಮಾಡಲಾಗಿದ್ದು ಯಾವುದೇ ಅರ್ಹರಿಗೆ ಗೊಂದಲವಾಗದಂತೆ ಕಾರ್ಡ್ ಗಳನ್ನು ವಿತರಿಸಲು ಅಧಿಕಾರಿಗಳಿಗೆ ವಿತರಿಸಲು ಸೂಚನೆ ನೀಡಿದ್ದೇನೆ ಎಂದರು.ಸರ್ಕಾರವು ಅನರ್ಹರನ್ನು ಹೊರಗಿಡುವ ಮಾನದಂಡಗಳನ್ವಯ ಯಾವುದೇ ಅರ್ಹ ಬಡ ಕುಟುಂಬಗಳ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿರುವುದಿಲ್ಲ ಎಂದರು.

ಪೋಷಕರ ಆದಾಯ ಹೆಚ್ಚಿದ್ದರೂ ಆ ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ವಾಸವಿದ್ದು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಿದ್ದಲ್ಲಿ ಪಡಿತರ ಚೀಟಿ ನೀಡಲು ಕ್ರಮವಹಿಸಲಾಗುವುದು ಮತ್ತು ಅರ್ಹ ಕುಟುಂಬ oಟಿಟiಟಿe ಮೂಲಕ ಅರ್ಜಿ ಸಲ್ಲಿಸಬೇಕು ಹಾಗೇಯೇ ತಹಶಿಲ್ದಾರ್ ನೀಡುವ ಆದಾಯ ಪ್ರಮಾಣ ಪತ್ರ ಮತ್ತು ಇನ್ನಿತರೆ ದಾಖಲೆಗಳನ್ನು ಪಡೆದು ಸ್ಥಳ ಪರಿಶೀಲನೆ ಮಾಡಿ ಅರ್ಹ ವಿದ್ದಲ್ಲಿ ಪಡಿತರ ಚೀಟಿ ನೀಡಲು ಕ್ರಮವಹಿಸಲಗುವುದು ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು