LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಬೆಟ್ಟಕೋಟೆ ಗ್ರಾ. ಪಂ. ನೂತನ ಅಧ್ಯಕ್ಷರಾಗಿ ಭೀಮೇಶ್ ಅವಿರೋಧ ಆಯ್ಕೆ ಪಂಚಾಯ್ತಿ ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ: ಭೀಮೇಶ

ದೇವನಹಳ್ಳಿ: ಬೆಟ್ಟಕೋಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಉತ್ತಮ ಚರಂಡಿ, ರಸ್ತೆ ನೀರಿನ ಸಂಪರ್ಕ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಮಾಡಲು ನಾನು ಸದಾಸಿದ್ದ ಎಂದು ಬೆಟ್ಟಕೋಟೆ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷ ಡಿ.ವಿ.ಭೀಮೇಶ. ಹೇಳಿದರು.

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೆಟ್ಟಕೋಟೆ ಗ್ರಾಪಂ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅಭಿನಂದನೆ ಸ್ವೀಕರಿಸಿ ಮಾತನಾಡಿ ಪಂಚಾಯ್ತಿಯ ಎಲ್ಲಾ ಒಂಭತ್ತು ಸದಸ್ಯರ ಸರ್ವಾನುಮತ ದಿಂದ ಅಧ್ಯಕ್ಷನನ್ನಾಗಿ ಅವಿರೋಧವಾಗಿ ಆಯ್ಕೆ ಅವರೆಲ್ಲರಿಗೂ ಆಯ್ಕೆಗಾಗಿ ಸಹಕಾರ ನೀಡಿದ ಕಾಂಗ್ರೆಸ್ ಮುಖಂಡರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಜಿ.ಲಕ್ಷ್ಮೀನಾರಾಯಣಪ್ಪ ಮಾತನಾಡಿ ಬೆಟ್ಟಕೋಟೆ ಗ್ರಾಮ ಪಂಚಾಯತಿ ಎಲ್ಲಾ ಸದಸ್ಯರ ಸಮನ್ವಯದಿಂದ ಅಧ್ಯಕ್ಷರಾಗಿರುವ ಭೀಮೇಶ್ ಉತ್ತಮ ಆಡಳಿತ ನೀಡಿ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ಮಾಡಲಿ, ಒಳ್ಳೆಯ ಹೊಸ ಯೋಜನೆಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಬೆಟ್ಟಕೋಟೆ ಗ್ರಾಮಪಂಚಾಯತಿ ಉಪಾಧ್ಯಕ್ಷೆ ಎನ್.ಅನಿತಾ,ಮಾಜಿ ಅಧ್ಯಕ್ಷರು ಮತ್ತು ಹಾಲಿ ಸದಸ್ಯರುಗಳಾದ ಲೋಕೇಶ್ ಗಾಂಧಿ ಮತ್ತು ಮಂಜುನಾಥ್ ಎಂ. ದೊಡ್ಡಸಣ್ಣೆ ಮುನಿರಾಜು, ಸದಸ್ಯರಾದ ನಾರಾಯಣಸ್ವಾಮಿ, ಭಾಗ್ಯಲಕ್ಷ್ಮಿ ಕೆ.ಬಿ, ವಿದ್ಯಾರಾಣಿ. ಎಸ್, ವಿಜಯಲಕ್ಷ್ಮಿ, ವಿಶಾಲಾಕ್ಷಿ, ಅರ್ಚನಾ, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಎಸ್.ಆರ್.ರವಿಕುಮಾರ್, ವಿಜಯಪುರ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ವೆಂಕಟೇಶ್, ಮುಖಂಡರುಗಳಾದ ವೆಂಕಟೇಶ್, ಚೌಡಪ್ಪನಹಳ್ಳಿ ಲೋಕೇಶ್, ಗಂಗಾಧರ ಮೂರ್ತಿ, ಲಲಿತೇಶ್, ಮುನೇಗೌಡ, ಮಲ್ಲೇಶ್, ಚನ್ನಕೇಶವ, ಪಿಡಿಒ ಕೆಂಪರಾಜಯ್ಯ, ಚುನಾವಣಾಧಿಕಾರಿ ಮಲ್ಲಿಕಾರ್ಜುನ್ ಬಾಬು ಸೇರಿದಂತೆ ಹಲವಾರು ಮುಖಂಡರು ಮತ್ತು ಸದಸ್ಯರು ಮತ್ತಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು