LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಳಗ್ಗೆ ಪ್ರಿಯಕರ, ಮಧ್ಯಾಹ್ನ 'ಪ್ರೇಯತಮೆ' ಆತ್ಮಹತ್ಯೆ

ಬೆಂಗಳೂರು: ಪ್ರೀತಿ ವಿಚಾರವಾಗಿ 2 ಮಕ್ಕಳ ತಾಯಿ ಮತ್ತು ಆಕೆಯ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 'ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರೇಯಿಸಿ ಕೂಡ ಆತ್ಮಹತ್ಯೆ ಮಾಡಿದ್ದಾರೆ. ಮೃತರನ್ನು ಜಾನ್ಸನ್ ಹಾಗೂ ದಿಲ್ಶಾದ್‌ ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ ಥಣಿಸಂದ್ರ ಮೂಲದ ಜಾನ್ಸನ್ ಎಂಬುವವರನ್ನು ದಿಲ್ಶಾದ್‌ ಪ್ರೀತಿಸುತ್ತಿದ್ದರು. ಸಾಮಾಜಿಕ ಮಾಧ್ಯಮಗಳ ಮೂಲಕ ಇವರಿಬ್ಬರ ಪರಿಚಯವಾಗಿತ್ತು. ಆದರೆ ಮಹಿಳೆಗೆ ವಿಜಯಪುರ ಮೂಲದ ಕೃಷ್ಣ ಎಂಬುವವರ ಜೊತೆ ಅದಾಗಲೇ ಮದುವೆಯಾಗಿತ್ತು.

ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದರು. ಆಕೆಯ ಗಂಡ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಆದಾಗ್ಯೂ ಜಾನ್ಸನ್ -ದಿಲ್ಶಾದ್‌ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ಜಾನ್ಸನ್ ಮನನೊಂದಿದ್ದ. ಬಳಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.

ಇಂದು ಬೆಳಗ್ಗೆ ಕೆಲಸಕ್ಕೆ ಹೋದ ಜಾಗದಲ್ಲಿ ಜಾನ್ಸನ್ ಥಣಿಸಂದ್ರದಲ್ಲಿರುವ ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಅಲ್ಲಿಗೆ ಹೋಗಿದ್ದ ದಿಲ್ಶಾದ್‌ ಶವ ನೋಡಿಕೊಂಡು ಬಂದಿದ್ದಳು. ಜಾನ್ಸನ್ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆ ಮಧ್ಯಾಹ್ನದ ವೇಳೆಗೆ ತಾನೂ ನೇಣಿಗೆ ಶರಣಾಗಿದ್ದಾಳೆ.

ಪ್ರಿಯಕರನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂತೆಯೇ ಮಹಿಳೆಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿಲ್ಶಾದ್ ತಾಯಿ ಬೇಗಂ ನೀಡಿದ ದೂರಿನ ಆಧಾರದ ಮೇಲೆ, ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು