LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಬೇಲೂರು ತಾಲ್ಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆ

ಬೇಲೂರು: ಮಹಾನ್ ಪುರುಷರ ಸಂದೇಶಗಳನ್ನು ನಾಡಿ ಜನಮನಕ್ಕೆ ತಲುಪಬೇಕು ಎಂಬ ಕಾರಣದಿಂದಲೇ ಸರ್ಕಾರ ಹತ್ತಾರು ಜಯಂತಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಕೇವಲ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿದರೆ ಸಾಲದು ಅವರ ಸಂದೇಶಗಳ ಆಶೋತ್ತರಗಳು ಪ್ರಮುಖವಾಗಿ ಯುವಜನತೆಗೆ ಮುಟ್ಟಬೇಕಿದೆ ಎಂದು ಬೇಲೂರು ತಹಸೀಲ್ದಾರ್ ಎಂ.ಮಮತ ಕರೆ ನೀಡಿದರು.

ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಹಿಂದುಳಿದ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಡಿ.ದೇವರಾಜ ಅರಸುರವರ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ನಡೆಸಿ ಮಾತನಾಡಿದ ಅವರು ಅರಸುರವರು ಅಂದಿನಕಾಲಘಟ್ಟದಲ್ಲಿ ಉತ್ತಮ ಶಿಕ್ಷಣ ಪಡೆದು ಕೃಷಿಯ ಬಗ್ಗೆ ಒಲವು ಹೊಂದುವ ಮೂಲಕ ಕ್ರಮೇಣ ರಾಜಕೀಯ ರಂಗಕ್ಕೆ ಪಾದಾರ್ಪಣೆ ನಡೆಸಿ, ದೀರ್ಘಕಾಲದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಉಳುವವನೆ ಭೂಮಿಯ ಒಡೆಯ, ಮಲ ಹೊರುವ ಪದ್ದತಿ ನಿಷೇದ ಸೇರಿದಂತೆ ದೇಶ ಕಂಡ ಅಪರೂಪ ಯೋಜನೆಗಳನ್ನು ರೂಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಿಂದುಳಿದ ವರ್ಗ ನೇತಾರರಾಗಿ ಬಡವರು, ನಿರ್ಗತಿಕರಿಗೆ ಸಹಾಯ ನೀಡುವ ಕಾರ್ಯಕ್ರಮಗಳನ್ನು ರೂಪಿಸಿದ್ದು, ಇಂದಿಗೂ ಕೆಲವು ಯೋಜನೆಗಳು ಜಾರಿಯಲ್ಲಿವೆ. ವಿಶೇಷವಾಗಿ ಉತ್ತಮ ಸಂಸದಿಯ ಪಟುವಾಗಿದ್ದ ಅರಸುರವರು ವಿಚಾರಧಾರೆಗಳು ಮತ್ತು ಅವರಲ್ಲಿ ಜನಪರ ಮತ್ತು ಸಾಮಾಜಿಕ ಚಿಂತನೆಗಳು ಯುವ ಜನತೆಗೆ ತಲುಪಬೇಕಿದೆ ಆಗ ಮಾತ್ರ ಇಂತಹ ಸಮಾರಂಭಗಳು ಅರ್ಥಪೂರ್ಣವಾಗಿ ನಡೆಯುತ್ತವೆ ಎಂದರು.

ಬೇಲೂರು ಪುರಸಭಾ ಅಧ್ಯಕ್ಷ ಎ.ಆರ್.ಆಶೋಕ್ ಮಾತನಾಡಿ, ಡಿ.ದೇವರಾಜು ಅರಸುರವರು ಮುತ್ಸದ್ದಿ, ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದರು. ಅವರಿಂದಾದ ಅಭಿವೃದ್ಧಿ ಕೆಲಸಗಳು ಮತ್ತು ಜನಪರ ಯೋಜನೆಗಳು ಮಾದರಿಯಾಗಿದೆ. ದೂರದೃಷ್ಟಿ ರಾಜಕಾರಣಿ ಎಂದೇ ಹೆಸರು ಪಡೆದ ಅರಸುರವರು ಗ್ರಾಮೀಣರ ಪಾಲಿನ ದೇವರು ಎಂದು ಕರೆಯಬಹುದು ಇಂತಹ ಮಹಾನ್ ಪುರುಷರ ಜಯಂತಿಗಳ ಕಾರ್ಯಕ್ರಮಗಳು ಸಮಯಕ್ಕೆ ತಕ್ಕಂತೆ ನಡೆಸಬೇಕಿದೆ. ತಾಲ್ಲೂಕು ಆಡಳಿತ ಈ ಬಗ್ಗೆ ಚಿಂತನೆ ಮಾಡಬೇಕಿದೆ,.ಪ್ರಮುಖವಾಗಿ ಬೇಲೂರು ಶಾಸಕರ ಬಗ್ಗೆ ನಮಗೆ ಅಪಾರ ಗೌರವಿದೆ.

ಅವರ ಅಭಿವೃದ್ಧಿ ಕಾರ್ಯಕ್ಕೆ ಸಹಮತವಿದೆ. ಆದರೆ ಕಾರ್ಯಕ್ರಮಗಳನ್ನು ನೌಕರರನ್ನು ಕಾಯಿಸುವುದು ನಿಜಕ್ಕೂ ಶೋಚನೀಯ, ಇದ್ದರಿಂದ ಸಾರ್ವಜನಿಕರ ಕೆಲಸಗಳು ತೀವ್ರ ವಿಳಂಭವಾಗುತ್ತದೆ ಎಂದು ಶಾಸಕರಿಗೆ ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಉಪನ್ಯಾಸ ವನ್ನು ಸಹ ಶಿಕ್ಷಕ ಟಿ.ಡಿ.ತಮ್ಮಣ್ಣಗೌಡ ನಡೆಸಿಕೊಟ್ಟರು. ಉಳಿದಂತೆ ತಾಲ್ಲೂಕುಪಂಚಾಯಿತಿ ಇಒ ಸತೀಶ್, ಬಿಸಿಎಂಇಲಾಖೆ ನಟರಾಜ್, ಕೆಡಿಪಿ ಸದಸ್ಯರಾದ ಚೇತನ್, ನಂದೀಶ್, ನವೀನ್, ಮುಖ್ಯಾಧಿಕಾರಿ ಸುಜಯ್ಕುಮಾರ್ ಹಾಜರಿದ್ದ ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕ ಲಕ್ಷ್ಮಿನಾರಾಯಣ ನಡೆಸಿದರು. ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು