LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಭಕ್ತರ ಭಾವನೆಗೆ ಧಕ್ಕೆ ತಿರುಪತಿ ಲಡ್ಡು ವಿವಾದ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಅರ್ಜಿ

ಬೆಂಗಳೂರು: ವಿಶ್ವವಿಖ್ಯಾತ ಧಾರ್ಮಿಕ ಕ್ಷೇತ್ರದಲ್ಲಿ ತಿರುಪತಿ ತಿರುಮಲ ಲಡ್ಡು ತಯಾರಿಕಾ ವಿವಾದದ ಪ್ರಕರಣ ಇದೀಗ ಸುಪ್ರಿಂಕೋರ್ಟ್ ಮೆಟ್ಟಿಲೇರಿದೆ.
ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು ಎಂಬ ಪ್ರಕರಣ ಪ್ರಶ್ನಿಸಿ ಸುರೇಶ್ ಎಂಬುವರು ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಾಣಿಗಳ ಕೊಬ್ಬು ಲಡ್ಡು ತಯಾರಿಕೆಗೆ ಬಳಸಲಾಗುತ್ತಿತ್ತು ಎಂಬ ಆರೋಪದಿಂದಾಗಿ ಭಕ್ತರ ಭಾವನೆ ಧಕ್ಕೆಯಾಗಿದೆ.

ಅವರ ಧಾರ್ಮಿಕ ಹಕ್ಕುಗಳಿಗೆ ಚ್ಯುತಿಯಾಗಿದೆ. ಈ ಪ್ರಕರಣವನ್ನು ನ್ಯಾಯಾಧೀಶರ ಅಥವಾ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಮತ್ತೊಂದೆಡೆ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಹಿನ್ನೆಲೆ ಭಕ್ತರಲ್ಲಿ ನಂಬಿಕೆ ಮೂಡಿಸುವ ಸಲುವಾಗಿ ಹೋಮ ಹವನ ಆಯೋಜನೆ ಮಾಡಲಾಗಿದೆ.

ಆಗಮ ಶಾಸ್ತ್ರಜ್ಞರ ಸಲಹೆ ಮೇರೆಗೆ ಈ ಶಾಂತಿ ಹೋಮ ಆಯೋಜನೆ ಮಾಡಲಾಗಿದ್ದು, ಸಿಎಂ ಚಂದ್ರಬಾಬು ನಾಯ್ಡು ಕೂಡ ಇದೇ ಸಲಹೆಯನ್ನ ನೀಡಿದ್ದರು ಎನ್ನಲಾಗಿದೆ.ತಿರುಮಲದ ಅರ್ಚಕ ರಾಮಕೃಷ್ಣ ದೀಕ್ಷಿತ್ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 6 ರಿಂದ 10 ಗಂಟೆವರೆಗೆ ಶಾಂತಿ ಹೋಮ ನಡೆದಿದೆ.
ದೇವಾಲಯದ ಬಳಿ ಇರುವ ಬಂಗಾರ ಬಾವಿ ಯಾಗ ಶಾಲೆಯಲ್ಲಿ ಈ ಶಾಂತಿ ಹೋಮ ನಡೆದಿದ್ದು, ಮೂರು ಹೋಮ ಕುಂಡಗಳನ್ನು ರಚಿಸಿ ಹೋಮ ನಡೆಸಲಾಗಿದೆ.

ವಾಸ್ತು ಕುಂಡ, ಸಭ್ಯಂ ಹೋಮ ಕುಂಡ, ಪೌಣರಿಕಂ ಹೋಮ ಕುಂಡ ಎಂಬ ಮೂರು ಹೋಮ ಕುಂಡಗಳು ರಚನೆ ಮಾಡಲಾಗಿತ್ತು.ಭಕ್ತರ ಅತಂಕ ಗೊಂದಲ ನಿವಾರಿಸಲು ಈ ಹೋಮ ಮಾಡುತ್ತಿರುವುದಾಗಿ ಟಿಟಿಡಿ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.ಹೀಗಾಗಲೇ ಪವಿತ್ರೋತ್ಸವವನ್ನು ನಡೆಸಲಾಗಿತ್ತು. ಆಗಸ್ಟ್ 15 ರಿಂದ 17ರ ವರೆಗೆ ಮೂರು ದಿನ ಪವಿತ್ರೋತ್ಸವ ನಡೆಸಲಾಗಿತ್ತು. ಆಕ್ಟೋಬರ್ 4 ರಿಂದ 12 ರ ವರೆಗೆ ತಿರುಮಲದಲ್ಲಿ ನಡೆಯಲಿರುವ ಬ್ರಹ್ಮೋತ್ಸವಕ್ಕೂ ಸಕಲ ಸಿದ್ದತೆ ನಡೆದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು