LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಭಾರತ ವಿಶ್ವದ 5ನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದ್ದು, ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದರು.

ಭಾರತೀಯ ಲೋಹ ಸಂಸ್ಥೆ (ಐಐಎಂ) ಹಮ್ಮಿಕೊಂಡಿದ್ದ ‘ಲೋಹಶಾಸ್ತ್ರಜ್ಞ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದಲ್ಲಿ ಉಕ್ಕಿನ ಉದ್ಯಮದ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಶ್ರಮಿಸಲಾಗುತ್ತಿದೆ. ಈ ರೂಪಾಂತರಕ್ಕೆ ಉಕ್ಕು ಪ್ರಮುಖ ಕೇಂದ್ರವಾಗಿ ಉಳಿದಿದ್ದು, ಜಾಗತಿಕ ವೇದಿಕೆಯಲ್ಲಿ ದೇಶದ ಸ್ಥಿತಿಸ್ಥಾಪಕತ್ವವನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಇದೇ ವೇಳೆ ತಮ್ಮ ಕ್ಷೇತ್ರದ ಸಾಧನೆಗಳನ್ನು ಸಚಿವರು ಶ್ಲಾಘಿಸಿದರು. ವಿಶೇಷ ಉಕ್ಕು, ಹಸಿರು ಉಕ್ಕು ತಯಾರಿಕೆಗೆ ಆದ್ಯತೆ ನೀಡಲಾಗಿದೆ. ಉಕ್ಕಿನ ಸುಸ್ಥಿರ ಉತ್ಪಾದನೆಗೆ ಜಲಜನಕ ಆಧಾರಿತ ಉಕ್ಕು ತಯಾರಿಕೆ ಮತ್ತು ಮರು ಬಳಕೆಯನ್ನು ಉತ್ತೇಜಿಸಲಾಗುತ್ತಿದೆ. ಉತ್ಪಾದನಾ ಸಂಪರ್ಕ ಉಪಕ್ರಮ ಸೇರಿದಂತೆ ಹಲವಾರು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಜಾರಿಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಭಾರತ ಜಗತ್ತಿನ ಐದನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ. ಈ ಪ್ರಯತ್ನಕ್ಕೆ ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಉಕ್ಕು ಕ್ಷೇತ್ರದಲ್ಲಿ ಸುಸ್ಥಿರ ಮತ್ತು ಚಲನಶೀಲ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಅದಕ್ಕೆ ಪೂರಕವಾಗಿ ನಿರ್ದಿಷ್ಟ ಕಾರ್ಯಸೂಚಿಗಳನ್ನು ರೂಪಿಸಲಾಗಿದೆ. ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಪ್ರಾಮುಖ್ಯ ನೀಡುವುದರ ಜತೆಗೆ, ಉಕ್ಕು ಉತ್ಪಾದನೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ವಾಯುಮಾಲಿನ್ಯವನ್ನು ಶೂನ್ಯ ಮಟ್ಟಕ್ಕೆ ತರುವ ಗುರಿ ಹೊಂದಲಾಗಿದೆ. 2070ರ ವೇಳೆಗೆ ಈ ಗುರಿಯನ್ನು ಖಚಿತವಾಗಿ ಸಾಧಿಸಲಾಗುವುದು ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಜಾಗತಿಕ ಪರಿಸರ ಸಮತೋಲನದ ಉದ್ದೇಶದ ಹಿನ್ನೆಲೆಯಲ್ಲಿ ಉಕ್ಕಿನ ಸುಸ್ಥಿರ ಉತ್ಪಾದನೆಗೆ ಹೈಡ್ರೋಜನ್ ಆಧಾರಿತ ಉಕ್ಕು ತಯಾರಿಕೆ ಮತ್ತು ಉಕ್ಕಿನ ಮರು ಬಳಕೆಯನ್ನು ಉತ್ತೇಜಿಸಲಾಗುತ್ತಿದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು