LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಭಾರತ-ಶ್ರೀಲಂಕಾ ಕ್ರಿಕೆಟ್ ದಿಗ್ಗಜರ ನಡುವೆ ಇಂದು ಚಿಕ್ಕಬಳ್ಳಾಪುರದಲ್ಲಿ ಪಂದ್ಯ

ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿರುವ ಸಾಯಿ ಕೃಷ್ಣನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಒನ್ ವರ್ಲ್ಡ್ ಒನ್ ಫ್ಯಾಮಿಲಿ ಪರಿಕಲ್ಪನೆಯಲ್ಲಿ ಫೆಬ್ರವರಿ 8ರಂದು ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ದಿಗ್ಗಜರ ನಡುವೆ ಟಿ - 20 ಪಂದ್ಯ ನಡೆಯಲಿದೆ. ಕಳೆದ ವರ್ಷವೂ ಇದೇ ಮಾದರಿಯಲ್ಲಿ ಕ್ರಿಕೆಟ್ ಪಂದ್ಯ ನಡೆದಿತ್ತು.

ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಆಯೋಜಿಸುತ್ತಿರುವ 'ಒನ್ ವರ್ಲ್ಡ್ ಒನ್ ಫ್ಯಾಮಿಲಿ' ಕ್ರಿಕೆಟ್ ಪಂದ್ಯವನ್ನು ಭಾರತೀಯ ಕ್ರಿಕೆಟ್ ದಂತಕತೆ ಡಾ. ಸುನಿಲ್ ಗವಾಸ್ಕರ್ ಅವರು ಸಂಘಟಿಸುತ್ತಿದ್ದಾರೆ. ಕಳೆದ ವರ್ಷ ಮೊದಲನೇ ಪಂದ್ಯ ನಡೆದಿತ್ತು. ಅಂದಿನ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್ ಸೇರಿದಂತೆ ಘಟಾನುಘಟಿ ಕ್ರಿಕೆಟ್ ದಿಗ್ಗಜರು ಭಾಗಿಯಾಗಿದ್ದರು.

ಬೆಳಗ್ಗೆ 9 ಗಂಟೆಗೆ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಆನಂತರ ದಿಗ್ಗಜರ ನಡುವೆ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಇದು ಟಿ-20 ಪಂದ್ಯವಾಗಿದ್ದು, ಬೆಳಗ್ಗೆ 10.50ಕ್ಕೆ ಶುರುವಾಗುವ ಕ್ರಿಕೆಟ್ ಪಂದ್ಯಾವಳಿ ಮಧ್ಯಾಹ್ನ 3.20ಕ್ಕೆ ಮುಗಿಯಲಿದೆ. ಬೆಳಗ್ಗೆ 9ರಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಶ್ರೀಲಂಕಾ ತಂಡ: ಅರವಿಂದ ಡಿಸಿಲ್ವಾ, ಅರ್ಜುನ ರಣತುಂಗ, ತಿಲಕರತ್ನೆ ದಿಲ್ಶನ್, ಉಪುಲ್ ತರಂಗ, ತಿಸಾರ ಪೆರೇರಾ, ತರಂಗ ಪರವಿತನ, ನುವಾನ್ ಜೋಯ್ಸಾ, ಮುತ್ತಯ್ಯ ಮುರಳೀಧರನ್, ಅಜಂತಾ ಮೆಂಡಿಸ್, ಚಮಿಂಡಾ ವಾಸ್, ರವೀಂದ್ರ ಪುಷ್ಪಕುಮಾರ, ಅಸೆಲಾ ಗುಣರತ್ನೆ, ಮಿಲಿಂದ ಸಿರಿವರ್ಧನ, ತಿಲನ್ ತುಷಾರ, ರೋಮೇಶ್ ಕಲುವಿತಾರಣ.

ಭಾರತ ತಂಡ: ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ಎಸ್ ಬದರಿನಾಥ್, ನಮನ್ ಓಜಾ, ಪ್ರಗ್ಯಾನ್ ಓಜಾ, ಸುಜಿತ್ ಸೋಮಸುಂದರ್, ಅಭಿಮನ್ಯು ಮಿಥುನ್, ಅಶೋಕ್ ದಿಂಡಾ, ವೆಂಕಟೇಶ್ ಪ್ರಸಾದ್, ಸುನಿಲ್ ಜೋಶಿ, ಪಾರ್ಥಿವ್ ಪಟೇಲ್, ಮನೋಜ್ ತಿವಾರಿ.ಇದೇ ವೇಳೆ 1974 - 75ರಲ್ಲಿ ಕರ್ನಾಟಕ ರಾಜ್ಯ ಮೊದಲ ಬಾರಿ ರಣಜಿ ಟ್ರೋಫಿ ಗೆದ್ದಾಗ ಭಾಗಿಯಾಗಿದ್ದ ಎಲ್ಲ ಕ್ರಿಕೆಟಿಗರು ಭಾಗವಹಿಸಲಿದ್ದು, ಅವರೆಲ್ಲರನ್ನು ವಿಶೇಷವಾಗಿ ಪುರಸ್ಕರಿಸಲಾಗುವುದು. ಜಿ.ಆರ್.ವಿಶ್ವನಾಥ್ ಅವರಿಗೆ ವಿಶೇಷ ಸನ್ಮಾನ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುನಿಲ್ ಗವಾಸ್ಕರ್, ಜಿ.ಆರ್. ವಿಶ್ವನಾಥ್ ಸೇರಿದಂತೆ ಹಲವು ಕ್ರಿಕೆಟ್ ದಿಗ್ಗಜರು ಭಾಗವಹಿಸಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು