LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಭೈರವನ ಕೊನೆ ಪಾಠ

ಡಾ.ಶಿವರಾಜ್‍ಕುಮಾರ್ ಅವರ ಮುಂದಿನ ಸಿನೆಮಾದ ಶೀರ್ಷಿಕೆ ಭೈರವನ ಕೊನೆ ಪಾಠಹೇಮಂತ್ ಎಂ ರಾವ್ ಮತ್ತು ಶಿವ ರಾಜ್‍ಕುಮಾರ್ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರಕ್ಕೆ ಭೈರವನ ಕೊನೆ ಪಾಠ ಎಂದು ಹೆಸರಿಡಲಾಗಿದೆ.

ಭೈರವನ ಕೊನೆ ಪಾಠ ತಲೆಮಾರುಗಳವರೆಗೆ ನೆನಪುಳಿಯುವಂಥ ಚಲನಚಿತ್ರವಾಗಲಿದೆ - ವೈಶಾಖ್ ಜೆ ಗೌಡಡಾ.ವೈಶಾಖ್ ಜೆ ಗೌಡ ಅವರ ವಿಜೆಎಫ್      ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭೈರವನ ಕೊನೆ ಪಾಠ ಚಿತ್ರಕ್ಕೆ ಹೇಮಂತ್ ಎಂ ರಾವ್ ಆಕ್ಷನ್ ಕಟ್ ಹೇಳಲಿದ್ದು, ಡಾ.ಶಿವ ರಾಜ್‍ಕುಮಾರ್ ನಾಯಕ ನಟರಾಗಿ ಬಣ್ಣ ಹಚ್ಚಲಿದ್ದಾರೆ.

ಹೇಮಂತ್ ಎಂ ರಾವ್ ಅವರ ಸಿನೆಮಾಗಳ ಶೀರ್ಷಿಕೆಗಳು ಯಾವಾಗಲೂ ವಿಶಿಷ್ಟವಾಗಿರುತ್ತವೆ. ಇದರ ಬಗ್ಗೆ ಪ್ರಶ್ನಿಸಿದಾಗ ಅವರು, ನಮ್ಮ ಆಡುಭಾಷೆಗೆ ಹತ್ತಿರವಾದ ಶೀರ್ಷಿಕೆಗಳು ನನಗೆ ಇಷ್ಟವಾಗುತ್ತವೆ. ಈ ಹಿಂದೆ ಕನ್ನಡ ಸಿನೆಮಾ ಶೀರ್ಷಿಕೆಗಳು ಕೇಳಲಿಕ್ಕೂ ಮಧುರವಾಗಿದ್ದು ಕುತೂಹಲ ಕೆರಳಿಸುವಂತೆ ಇರುತ್ತಿದ್ದವು. ನನ್ನ ನಿರ್ದೇಶನದ ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿ, ಸಪ್ತ ಸಾಗರದಾಚೆ ಎಲ್ಲೋ? ಸಿನೆಮಾ ಶೀರ್ಷಿಕೆಗಳು ಸಾಕಷ್ಟು ಜನ ಮೆಚ್ಚುಗೆಗೆ ಪಾತ್ರವಾದವು. ಭೈರವನ ಕೊನೆ ಪಾಠ ಕೂಡಾ ಆ ಸಾಲಿಗೆ ಸೇರಲಿದೆ.

ಕನ್ನಡ ಸಿನೆಮಾ ಜಗತ್ತಿನ ವಿಶಿಷ್ಟ ಶೀರ್ಷಿಕೆಗಳ ಪರಂಪರೆಯನ್ನು ಮುಂದಿನ ತಲೆಮಾರುಗಳಿಗೂ ತಲುಪಿಸುವ ಉದ್ದೇಶ ನಮ್ಮದು. ಅದರಲ್ಲೂ ನಾನು ಬಹಳವಾಗಿ ಇಷ್ಟಪಡುವ ಶಿವಣ್ಣ ಅವರ ಸಿನೆಮಾ ಶೀರ್ಷಿಕೆಗಳ ಸೌಂದರ್ಯವನ್ನು ಸದಾ ಕಾಲ ನೆನಪಿರುವಂತೆ ಮಾಡುವುದು ನನ್ನ ಬಯಕೆ. ಈ ಚಿತ್ರದಲ್ಲಿ ಭೈರವನೇ ಕೇಂದ್ರ ಪಾತ್ರವಾಗಿದ್ದು, ನಮ್ಮ ಶೀರ್ಷಿಕೆ ಅಚ್ಚುಕಟ್ಟಾಗಿ ಹೊಂದುತ್ತದೆ. ಅವನು ಮಾಡುವ ಪಾಠ ಯಾವುದು ಅದನ್ನು ಕೊನೆ ಪಾಠ ಅಂದಿರೋದು ಯಾಕೆ ಅನ್ನುವುದೇ ಇದರ ಮುಖ್ಯ ತಿರುಳು. ನಮ್ಮ ಶೀರ್ಷಿಕೆ ವೀಕ್ಷಕರಲ್ಲಿ ಈ ಪ್ರಶ್ನೆಗಳನ್ನು ಯಶಸ್ವಿಯಾಗಿ ಹುಟ್ಟುಹಾಕುತ್ತದೆ ಅನ್ನುವುದು ನಮ್ಮ ನಂಬಿಕೆ ಎಂದು ವಿವರಿಸಿದರು.

ಇದು ನಿರ್ಮಾಪಕ ವೈಶಾಖ್ ಜೆ ಗೌಡ ನಿರ್ಮಾಣದ ಚೊಚ್ಚಲ ಚಿತ್ರವಾಗಿದ್ದು, ಶೀರ್ಷಿಕೆ ಬಗ್ಗೆ ಈಗಾಗಲೇ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿರುವ ಬಗ್ಗೆ ಸಂತೋಷದಿಂದ ಹೇಳಿಕೊಂಡರು. ಈ ಶೀರ್ಷಿಕೆಯನ್ನು ಮೊದಲ ಬಾರಿ ಕೇಳಿದಾಗ ನಾನೆಷ್ಟು ಉತ್ಸಾಹಗೊಂಡಿದ್ದೆನೋ ಅದೇ ಉತ್ಸಾಹ ಜನರಲ್ಲೂ ಕಂಡುಬರುತ್ತಿರುವುದು ನನಗೆ ಖುಷಿ ಕೊಟ್ಟಿದೆ.

ಇದೊಂದು ವಿಭಿನ್ನ ಹಾಗೂ ವಿಶಿಷ್ಟ ಚಿತ್ರವಾಗಿ ಮೂಡಿಬರಲಿದ್ದು, ಮುಂದಿನ ತಲೆಮಾರುಗಳವರೆಗೆ ತನ್ನ ಜನಪ್ರಿಯತೆ ಉಳಿಸಿಕೊಳ್ಳಲಿದೆ? ಎಂದು ಆಶಾಭಾವನೆ ವ್ಯಕ್ತಪಡಿಸಿದರು.ಸಿನೆಮಾದಲ್ಲಿ ಬಳಸಲಾಗಿರುವ ಬಾಣದ ಗುರುತಿನ ಬಗ್ಗೆ ತೂರಿಬಂದ ಪ್ರಶ್ನೆಗಳಿಗೆ ಸದ್ಯದಲ್ಲೇ ಬಿಡುಗಡೆಯಾಗಲಿರುವ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಅದಕ್ಕೆ ಉತ್ತರ ಸಿಗಲಿದೆ ಎಂಬ ಒಕ್ಕೊರಲಿನ ಪ್ರತಿಕ್ರಿಯೆ ಕೇಳಿಬಂತು.ಈ ವರ್ಷ ಡಾ.ಶಿವ ರಾಜ್‍ಕುಮಾರ್ ಅವರ ಹುಟ್ಟುಹಬ್ಬಕ್ಕೆ ಮೊದಲು ಭೈರವನ ಕೊನೆ ಪಾಠ ಚಿತ್ರದ ಫಸ್ಟ್ ಲುಕ್ ಪೆÇೀಸ್ಟರ್ ಬಿಡುಗಡೆಗೊಳ್ಳುವ ನಿರೀಕ್ಷೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು