LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮಂಜು ಕವಿದ ವಾತಾವರಣ `ಸಂಜು' ಬದುಕಿನ ಅನಾವರಣ

ಪ್ರೇಮ ಕಥೆಗಳಿಗೆ ಕೊನೆಯಿಲ್ಲ...ಭಾವನಾತ್ಮಕ ಸಂಬಂಧಗಳಿಗೆ ಸಾವಿಲ್ಲ ..ಪ್ರಕೃತಿಗೆ ಸೋಲದ ಮನಸ್ಸಿಲ್ಲ ಎಂಬುದನ್ನ ಚೆನ್ನಾಗಿ ಅರ್ಥೈಸಿಕೊಂಡಿರುವ ನಟ- ನಿರ್ದೇಶಕ ಯತಿರಾಜ್, ಮೇಲಿನ ಮೂರೂ ಅಂಶಗಳನ್ನು ಒಂದೇ ಫ್ರೇಮಿನಲ್ಲಿ ಸೆರೆ ಹಿಡಿದಿದ್ದಾರೆ. ಅದು ಅವರ ನಿರ್ದೇಶನದ ' ಸಂಜು' ಚಿತ್ರದಲ್ಲಿ ಸಾಧ್ಯಗೊಂಡಿದೆ. ಮತ್ತು ಇದೇ 27 ರಂದು ತೆರೆಗೆ ಬರಲು ಸಜ್ಜಾಗಿದೆ.

ಪತ್ರಕರ್ತರೂ ಆಗಿರುವ ಯತಿರಾಜ್ ತಮ್ಮ ಒಟ್ಟಾರೆ ಅನುಭವವನ್ನು ಒಟ್ಟುಗೂಡಿಸಿ ಒಂದೊಳ್ಳೆ ಕಥೆ ಮಾಡಿ ಇದೀಗ ಸಿನಿಮಾ ರೂಪದಲ್ಲಿ ತಂದಿರುವಂತೆ ಕಾಣುತ್ತದೆ.ಮೈಸೂರಿನ ಸಂತೋಷ್ ಡಿ.ಎಂ ನಿರ್ಮಾಣದ 'ಸಂಜು' ಸಿನಿಮಾ ಬಗ್ಗೆ ಯತಿರಾಜ್ ಬಹಳ ಆತ್ಮ ವಿಶ್ವಾಸದಿಂದ ಮಾತನಾಡುತ್ತಾರೆ.
'ವಿಶೇಷವಾಗಿ ಟೀನೇಜಿನಲ್ಲಿ ಬಹಳಷ್ಟು ಏರಿಳಿತಗಳು, ಸೋಲುಗಳು, ಹತಾಶೆಗಳು ಅವಮಾನಗಳು ಘಟಿಸುತ್ತವೆ. ಕೆಲವರು ಅದನ್ನು ಸುಲಭವಾಗಿ ಮೆಟ್ಟಿ ಮುಂದೆ ಸಾಗುತ್ತಾರೆ. ಇನ್ನೂ ಕೆಲವರು ತಮಗೆ ಎದುರಾಗುವ ಘಟನೆಗಳಿಗೆ ಅಂಜಿ ಎದೆಗುಂದುತ್ತಾರೆ.

ಅಂತಹ ಎರಡು ಪ್ರಸಂಗವನ್ನು ಪ್ರೀತಿಯ ಚೌಕಟ್ಟಿನಲ್ಲಿ ಹೇಳಿದ್ದೇನೆ. ನನ್ನ ಚಿತ್ರವನ್ನು ಎಲ್ಲರೂ ಮೆಚ್ಚುತ್ತಾರೆ ಎಂದು ನಾನು ಹೇಳಲಾರೆ. ಆದರೆ, ಬದುಕನ್ನು ಮತ್ತು ಸಂಬಂಧಗಳನ್ನು ಆಳದ ದೃಷ್ಟಿಯಿಂದ ನೋಡುವ ಮಂದಿ ಅಪ್ಪಿಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ' ಅನ್ನೋದು ಯತಿರಾಜ್ ವಿಶ್ವಾಸ.
ಚಿತ್ರದ ಹೈಲೈಟ್ ಬಗ್ಗೆ ಮಾತನಾಡುವಾಗ ಮೊದಲು ನಿರ್ಮಾಪಕರಾದ ಸಂತೋಷ್ ಅವರನ್ನು ನೆನೆಯುತ್ತಾರೆ.

ಅವರಿಗಿದು ಮೊದಲ ಚಿತ್ರವಾದರೂ ಯಾವುದಕ್ಕೂ ಕೊರತೆ ಮಾಡಿಲ್ಲ. ಎಲ್ಲರನ್ನೂ ಇಂದಿಗೂ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ ಎಂದು ಹೇಳುವ ಮೂಲಕ ಕೃತಘತೆ ಸಲ್ಲಿಸುತ್ತಾರೆ.ಚಿತ್ರದ ಎರಡನೇ ಹೈಲೈಟ್ ಲೊಕೇಷನ್. ಮಡಿಕೇರಿಯ ಮೂರ್ನಾಡುವಿನಲ್ಲಿ ಹಾಕಲಾಗಿದ್ದ ಬಸ್ ಸ್ಟಾಪ್ ಸೆಟ್, ನಾಯಕಿಯ ಮನೆ, ನಾಯಕನ ಮನೆ ಮತ್ತು ಅಲ್ಲಿನ ಪರಿಸರ ಚಿತ್ರಕ್ಕೆ ಮೆರುಗು ತಂದುಕೊಟ್ಟಿದೆ.

ಅದರ ತೂಕ ಹೆಚ್ಚುವಂತೆ ಮಾಡಿದ್ದು ಚಿತ್ರದಲ್ಲಿ ನಟಿಸಿದ ಕಲಾವಿದರು. ಸುಂದರಶ್ರೀ, ಸಂಗೀತ, ಬಲರಾಜುವಾಡಿ, ಅಪೂರ್ವ, ಬೌ ಬೌ ಜಯರಾಮ್, ಮಹಂತೇಶ್, ಪ್ರಕಾಶ್ ಶೆಣೈ ಮತ್ತು ಕಾತ್ಯಾಯಿನಿ ಅವರುಗಳ ಅಭಿನಯವಂತೂ ತೆರೆಯ ಮೇಲೇ ಸವಿಯಬೇಕು ಅನ್ನೋದು ನಿರ್ದೇಶಕರ ಅಭಿಪ್ರಾಯ.
ಮೂರನೇ ಮುಖ್ಯ ಅಂಶವೆಂದರೆ ನಾಯಕಿ ಸಾತ್ವಿಕ ಅವರ ಅಭಿನಯ. ರಾಜ್ಯ ಪ್ರಶಸ್ತಿ ಪಡೆಯಬಲ್ಲ ಸೂಕ್ಷ್ಮ ಅಭಿನಯವನ್ನು ಜನ ಖಂಡಿತ ಮೆಚ್ಚಿಕೊಳ್ಳುತ್ತಾರೆ ಎಂದು ಬಣ್ಣಿಸುವ ಯತಿರಾಜ್ ನಾಯಕ ಮನ್ವಿತ್ ಅವರನ್ನೂ ಬಿಟ್ಟು ಕೊಡುವುದಿಲ್ಲ. ಛಾಯಾಗ್ರಾಹಕ ವಿದ್ಯಾ ನಾಗೇಶ್ ಸೆರೆ ಹಿಡಿದಿರುವ ಸುಂದರ ದೃಶ್ಯಗಳಿಗೆ, ಚಿತ್ರದ ಹಿನ್ನಲೆ ಸಂಗೀತ ಸಾಕಷ್ಟು ಪುಷ್ಠಿ ನೀಡಿದೆ.

ವಿಜಯ್ ಹರಿತ್ಸ ನನ್ನೆಲ್ಲಾ ಟಾರ್ಚರಗಳನ್ನು ಸಹಿಸಿ ಸಹಕರಿಸಿ ಚಿತ್ರಕ್ಕೆ ಬೇರೆಯದೇ ಆಯಾಮ ತಂದುಕೊಟ್ಟಿರುವುದಾಗಿ ತಂಡದ ಬಗ್ಗೆ ಮೆಚ್ಚುಗೆ ಸೂಚಿಸುತ್ತಾರೆ. ಥ್ರಿಲ್ಲರ್ ಮಂಜು ಅವರು ಎರಡು ಸಾಹಸ ದೃಶ್ಯಗಳು, ಮದನ್- ಹರಿಣಿ ನೃತ್ಯ ಸಂಯೋಜನೆಯ ಎರಡು ಹಾಡುಗಳು ಚಿತ್ರಕ್ಕೆ ಕಮರ್ಷಿಯಲ್ ಅಂಶ ತಂದು ಕೊಟ್ಟಿದೆ. ಸಂಜೀವ ರೆಡ್ಡಿ ಅವರ ಸಂಕಲನ ಮತ್ತು ಸೋನುಸಾಗರ ಹಾಗೂ ಅರುಣ್ ಕುಮಾರ್ ಅವರ ಸಹ ನಿರ್ದೇಶನ ಚಿತ್ರಕ್ಕಿದೆ. ಮಸಾಲ ಸಿನಿಮಾಗಳ ನಡುವೆ ಮನಸೂರೆಗೊಳ್ಳಬಲ್ಲ ಚಿತ್ರವನ್ನು ಪ್ರೇಕ್ಷಕ ಹೇಗೆ ಸ್ವೀಕರಿಸುತ್ತಾನೆ ಎಂಬುದನ್ನು ಕಾದು ನೋಡಬೇಕು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು