LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮದ್ಯ ಅಂಗಡಿ ತೆರೆಯಲು ಗ್ರಾಮಸ್ಥರ ವಿರೋಧ

ಕನಕಪುರ:ತಾಲ್ಲೂಕಿನ ಕಚುವನಹಳ್ಳಿ ಗ್ರಾಮದಲ್ಲಿ ಎಂಎಸ್‍ಐಎಲ್ ಮದ್ಯದ ಅಂಗಡಿಯನ್ನು ತೆರೆಯಲು ಅಬಕಾರಿ ಇಲಾಖೆಯವರು ಸ್ಥಳ ಪರಿಶೀಲನೆ ನಡೆಸಿದ್ದು ನಮ್ಮ ಗ್ರಾಮದಲ್ಲಿ ಮದ್ಯದ ಅಂಗಡಿಯನ್ನು ತೆರೆಯಲು ನಮ್ಮ ಗ್ರಾಮಸ್ಥರುಗಳಾದ ನಾವುಗಳು ಅವಕಾಶವನ್ನು ನೀಡುವುದಿಲ್ಲವೆಂದು ಕಚುವನಹಳ್ಳಿ ಗ್ರಾಮದ ಮುಖಂಡ ಕುಮಾರ್ ವಿರೋಧ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದರಿಂದ ಮದ್ಯ ವ್ಯಸನಿಗಳ ಕಾಟ ಜಾಸ್ತಿಯಾಗಿ ಹಲವಾರು ತೊಂದರೆ ಗಳನ್ನು ಎದುರಿಸಬೇಕಾಗುತ್ತದೆ,ಈಗ ನಮ್ಮ ಗ್ರಾಮದಲ್ಲಿ ಎಲ್ಲಾ ಸಮುದಾಯದವರು ಸಹ ಬಾಳ್ವೆಯಿಂದ ಜೀವನ ನಡೆಸುತ್ತಿದ್ದೇವೆ,ಮದ್ಯದಂಗಡಿ ನಮ್ಮ ಗ್ರಾಮದ ನೆಮ್ಮದಿ ಹಾಲಾಗುವುದರಿಂದ ಯಾವುದೇ ಕಾರಣಕ್ಕೂ ಮದ್ಯ ದಂಗಡಿ ತೆರೆಯಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮತ್ತೊಬ್ಬ ಮುಖಂಡರಾದ ಸುರೇಂದ್ರ ಮಾತನಾಡಿ ಮದ್ಯದಂಗಡಿ ಟೆರೆಯುವುದರಿಂದ ನಮ್ಮ ಗ್ರಾಮದ ಯುವಕರು ದುಶ್ಚಟಗಳಿಗೆ ಬಲಿಯಾಗಲಿದ್ದು, ಇದರಿಂದ ಅವರ ಕುಟುಂಬಗಳು ಬೀದಿಗೆ ಬೀಳುವ ಸಾಧ್ಯತೆಗಳಿವೆ, ಗ್ರಾಮದಿಂದ ಯುವಕ ಯುವತಿಯರು ಕಾಲೇಜಿಗೆ ಹೋಗುತ್ತಿದ್ದು ಮಧ್ಯದಂಗಡಿಯಿಂದ ಅವರ ಮೇಲೆ ಕೆಟ್ಟ ಪರಿಣಾಮಗಳು ಬೀರುವುದರಿಂದ ಅವರಿಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ಅನುಭವಿಸಬೇಕಾಗುತ್ತದೆ, ಆದ್ದರಿಂದ ನಮ್ಮ ಕ್ಷೇತ್ರದ ಶಾಸಕರು ಉಪ ಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಂಸದರಾದ ಡಿ ಕೆ ಸುರೇಶ್ ರವರು ನಮ್ಮ ಗ್ರಾಮದಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಅವರಲ್ಲಿ ಮನವಿಯನ್ನು ಮಾಡುತ್ತಿದ್ದು ತಾಲ್ಲೂಕಿನಾದ್ಯಂತ ಯಾವುದೇ ಗ್ರಾಮಗಳಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಹೇಳಿದರು.

ತಾಲ್ಲೂಕಿನ ಹೆಸರಾಂತ ಶಕ್ತಿ ದೇವತೆ ಶ್ರೀ ಕಬ್ಬಾಳಮ್ಮ ದೇವಾಲಯವಿದ್ದು ಇಲ್ಲಿ ಮಂಗಳವಾರ,ಶುಕ್ರವಾರ ಭಾನುವಾರಗಳಂದು ವಿಶೇಷ ಪೂಜೆಗಳು ನಡೆಯಲಿದ್ದು, ಇಲ್ಲಿಗೆ ಸಾವಿರಾರು ಭಕ್ತರು ಆಗಮಿಸಿ ಕುರಿ ಕೋಳಿ ಮೇಕೆಗಳನ್ನು ಕಡಿದು ಅಮ್ಮನಿಗೆ ಹರಕೆ ತೀರಿಸುತ್ತಾರೆ, ಕಾಬ್ಬಾಳು ದೇವಸ್ಥಾನಕ್ಕೂ ನಮ್ಮ ಕಚುವನಹಳ್ಳಿ ಗ್ರಾಮಕ್ಕೆ ಕೂಗಳತೆ ದೂರವಿದ್ದು, ಮಧ್ಯದಂಗಡಿಯನ್ನು ನಮ್ಮ ಗ್ರಾಮದಲ್ಲಿ ತೆರೆದರೆ ಅನಾಹುತಗಳಾಗುವ ಸಾಧ್ಯತೆಗಳಿವೆ ಎಂದು ಆರೋಪ ಮಾಡಿದರು.ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಪುಷ್ಪಾವತಿ,ಗ್ರಾಮ ಪಂಚಾಯ್ತಿ ಸದಸ್ಯೆ ಸುನೀತಾ ರವಿಕುಮಾರ್, ಕೆ ಬಿ ರಾಜು,ಸುಂದರೇಶ್,ಚಂದ್ರು,ಉಮೇಶ್,ಶಿವಬಸವೇಗೌಡ, ಗೌರಮ್ಮ ಸೇರಿದಂತೆ ಹಲವಾರು ಗ್ರಾಮದ ಮುಖಂಡರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು