LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಧ್ಯಂತರ ಜಾಮೀನು ದರ್ಶನ್‌ಗೆ ಆರು ವಾರಗಳ ಕಾಲ ನಿರಾಳ

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ಅವರಿಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರಾಗಿದೆ.

ಹೈಕೋರ್ಟ್ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
ಇಂದು ಬೆಳಿಗ್ಗೆ ಜಾಮೀನು ಮಂಜೂರು ಮಾಡಿದ್ದು, ದರ್ಶನ್ ಅವರುತಮಗೆ ಬೇಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯ ಬಹುದಾಗಿದೆ. ಚಿಕಿತ್ಸೆ ಪಡೆದ ನಂತರ ಒಂದು ವಾರದೊಳಗಾಗಿ ಚಿಕಿತ್ಸಾ ವರದಿಯನ್ನು ಕೋರ್ಟ್ಗೆ ನೀಡಬೇಕಾಗಿದೆ.

ಇದೇ ಸಂದರ್ಭದಲ್ಲಿ ಅವರ ಪಾಸ್‌ಪೋರ್ಟ್ ಸಹ ಸೆರಂಡರ್ ಮಾಡಲು ಸೂಚನೆ ನೀಡಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ ಎಂದು ದರ್ಶನ್ ಪರ ವಕೀಲ ಸುನೀಲ್ ಕುಮಾರ್ ತೀರ್ಪಿನ ನಂತರ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್ಲಿ ಚಿಕಿತ್ಸೆ ಪಡೆಯಬೇಕೆಂಬುದರ ಬಗ್ಗೆ ದರ್ಶನ್ ಕುಟುಂಬದವರು ನಿರ್ದರಿಸುತ್ತಾರೆ. ನ್ಯಾಯಾಲಯ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಪೂರೈಸುತ್ತೇವೆ ಎಂದು ಅವರು ತಿಳಿಸಿದ್ದಾರೆ. ಮತ್ತೊಂದೆಡೆ ಬಳ್ಳಾರಿ ಜೈಲು ಸಿಬ್ಬಂದಿಗೆ ತಮಗೆ ಮಂಜೂರಾಗಿರುವ ಮಧ್ಯಂತರ ಜಾಮೀನು ಬಗ್ಗೆ ಮಾಹಿತಿ ಪಡೆದ ದರ್ಶನ್ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಇಂದು ಮಧ್ಯಾಹ್ನದೊಳಗಾಗಿ ಜಾಮೀನಿಗೆ ಸಂಬAಧಪಟ್ಟAತಹ ಪ್ರಕ್ರಿಯೆಯನ್ನು ನ್ಯಾಯಾಲಯದಲ್ಲಿ ಪೂರೈಸಿ ಬಿಡುಗಡೆ ಆದೇಶ ಪತ್ರ ಪಡೆದು ಸಂಜೆಯೊಳಗಾಗಿ ದರ್ಶನ್ ಅವರನ್ನು ಬಿಡುಗಡೆ ಮಾಡಿಸುವ ಬಗ್ಗೆ ಕುಟುಂಬದವರು ಅಗತ್ಯ ಕ್ರಮಗಳನ್ನು ಜರುಗಿಸಲು ಮುಂದಾಗಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು