LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮನೆ ಮೇಲೆ ಬಂಡೆ ಉರುಳಿ ಐವರಿಗೆ ಗಾಯ

ರಾಮನಗರ: ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರದ ಗೆಜ್ಜಲುಗುಡ್ಡೆ ಬಳಿ ಮನೆ ಮೇಲೆ ಬಂಡೆ ಉರುಳಿ ಐದು ಜನರಿಗೆ ಗಾಯವಾಗಿರುವ ಘಟನೆ ನಡೆದಿದೆ. ಬುಧವಾರ ಸಂಜೆಯಿಂದ ರಾತ್ರಿವರೆಗೂ ಧಾರಾಕಾರ ಮಳೆ ರಾಮನಗರದಲ್ಲಿ ಸುರಿಯುತು.

ಈ ಪರಿಣಾಮ ಗೆಜ್ಜಲಗುಡ್ಡೆಯಲ್ಲಿ ವಾಸವಾಗಿದ್ದ ಸೈಯದ್ ಗೌಸ್ ಎಂಬುವರ ಮನೆ ಮೇಲೆ ದೊಡ್ಡ ಗಾತ್ರದ ಬಂಡೆ ಉರುಳಿದ ಪರಿಣಾಮ ಮನೆಯಲ್ಲಿ ಮಲಗಿದ್ದ ಇವರಿಗೆ ಗಾಯಗಳಾಗಿ ಅಪಾಯದಿಂದ ಪಾರಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು ಮುಂಜಾನೆ 3-30 ಗಂಟೆ ಸಮಯದಲ್ಲಿ ಘಟನೆ ನಡೆದಿದೆ ಗಾಯಗೊಂಡವರು : ಸೈಯದ್ ಗೌಸ್ (42) ಮನೆಯ ಯಜಮಾನ, ಆತನ ಪತ್ನಿ ಸೈಯದ್ ಪರ್ಮಾನ್ (32), ಮಕ್ಕಳಾದ ಸೈಯದ್ ಪರಮಾನ್ (14), ಸೈಯದ್ ಹಾಕಿಲ್ (7), ಸೈಯದ್ ಕಬೀರ್ (10) ಗಾಯಗೊಂಡವರು.

ಇವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೈಯದ್ ಕಬೀರ್ ಎಂಬ ಮಗುವಿಗೆ ಕಿವಿ ಭಾಗಕ್ಕೆ ಗಾಯವಾಗಿದ್ದು ಒಳ ರೋಗಿಯಾಗಿ ಈ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ವೈದ್ಯರು ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ. ಉಳಿದವರಿಗೆ ಹೊರ ರೋಗಿಯಾಗಿ ಚಿಕಿತ್ಸೆ ನೀಡಲಾಗುತ್ತದೆ. ತಪ್ಪಿದ ಬಾರಿ ಅನಾಹುತ : ಮೇಲಿಂದ ಬಂಡೆ ದೊಡ್ಡ ಗಾತ್ರದ್ದೆ ಉರುಳಿದೆ ಬಂಡೆ ಮನೆಯಿಂದ ಪಕ್ಕಕ್ಕೆ ಸರಿದು ಗೋಡೆಗೆ ಗುದ್ದಿ ಬಂದಿದೆ ಇದರಿಂದ ಗೋಡೆ ಕುಸಿದು ಗೋಡೆಗೆ ಕಟ್ಟಿದ್ದ ಸಿಮೆಂಟ್ ಇಟ್ಟಿಗೆಗಳು ಮಲಗಿದ್ದವರ ಮೇಲೆ ಬಿದ್ದ ಪರಿಣಾಮ ಸಣ್ಣ ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ.

ಬಹುಶಹ ಬಂಡೆ ಮನೆ ಮೇಲೆ ಉರುಳಿದರೆ ಬಾರಿ ಅನಾಹುತ ಸಂಭವಿಸುತ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ಪೆÇಲೀಸ್ ಮತ್ತು ನಗರಸಭೆ ಹಾಗೂ ತಾಲ್ಲೂಕು ಆಡಳಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು