LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮಮತಾ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ

ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ಊಚನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಮಮತಾ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಹಿಂದಿನ ಅಧ್ಯಕ್ಷರಾಗಿದ್ದ ನಿರ್ಮಲ ಪುಟ್ಟಶೇಖರ್ ನೀಡಿದ ರಾಜೀನಾಮೆ ಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.

ಚುನಾವಣೆಯ ಪ್ರಕ್ರಿಯೆಯಲ್ಲಿ ಮಮತಾ ಕೃಷ್ಣೇಗೌಡ ಹೊರತುಪಡಿಸಿ ಉಳಿದ ಯಾವಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಮಮತಾ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಘೋಷಿಸಿದರು.ನೂತನ ಅಧ್ಯಕ್ಷೆ ಅಭಿನಂದಿಸಿ ಮಾತನಾಡಿದ ಗ್ರಾಮದ ಮುಖಂಡ ಊಚನಹಳ್ಳಿ ನಟರಾಜು ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ.ಈ ಸಂದರ್ಭದಲ್ಲಿ ಹೈನುವಾರಿಕೆ ನೆರವಾಗಲಿದೆ.

ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮವಾಗಿ ಬೆಳೆದು ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿದೆ. ಹೈನುಗಾರಿಕೆಯಿಂದ ಆದಾಯ ಕಾಣಬಹುದಾಗಿದೆ.ಈ ಅವಕಾಶ ಬಳಸಿಕೊಳ್ಳಬೇಕು ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ನಿರ್ದೇಶಕರು ಸಂಘದಲ್ಲಿ ರಾಜಕಾರಣ ಬೆರಸದೇ ಪಕ್ಷಾತೀತವಾಗಿ ಪಾಲ್ಗೊಂಡು ಸಂಘದ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಸಲಹೆ ನೀಡಿದರು.

ಬಳಿಕ ಮಾತನಾಡಿದ ನೂತನ ಅಧ್ಯಕ್ಷೆ ನಿರ್ಮಲ ಕೃಷ್ಣೆಗೌಡ ನನ್ನನ್ನು ಅವಿರೋಧವಾಗಿ ಅಧ್ಯಕ್ಷರಾಗಲು ಸಹಕರಿಸಿದ ನಮ್ಮ ಗ್ರಾಮದ ಮುಖಂಡರು ಹಾಗೂ ಸಂಘದ ಸದಸ್ಯರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು.ಷೇರುದಾರರು ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲನ್ನು ಸರಬರಾಜು ಮಾಡಬೇಕು.ಸಂಘವು ಉಳಿದರೆ ನಾವೆಲ್ಲರೂ ಉಳಿದಂತೆ.ಆದ್ದರಿಂದ ನನ್ನ ಆಡಳಿತ ಅವಧಿಯಲ್ಲಿ ಎಲ್ಲರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷೆ ಮಂಜುಳಾ ಚಲುವರಾಜು, ನಿರ್ದೇಶಕರಾದ ನಿರ್ಮಲ ಪುಟ್ಟಶೇಖರ್, ರೂಪ ಪುಟ್ಟಸ್ವಾಮಿ, ಸವಿತಾ ಸಂತೋಷ್, ಶಶಿಕಲಾ ಯೋಗೇಶ್, ಲತಾ ನಾಗೇಶ್, ಗ್ರಾಮದ ಹಿರಿಯ ಮುಖಂಡ ಸದಾಶಿವ, ಪುಟ್ಟಶೇಕರ್, ಪುಟ್ಟಸ್ವಾಮಿ, ಕೃಷ್ಣಗೌಡ, ಸಂಘದ ಕಾರ್ಯದರ್ಶಿ ಭಾಗ್ಯ ಬಿ ಕೆ, ಶಿವಮೂರ್ತಿ, ಸೇರಿದಂತೆ ಗ್ರಾಮಸ್ಥರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು