LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ದುರುಳರು, ರಕ್ತದ ಮಡುವಿನಲ್ಲಿ ಗೋವುಗಳ ನರಳಾಟ

ಬೆಂಗಳೂರು: ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ನಗರದ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ.

ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ಡ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸಧ್ಯ ಹಸುಗಳಿಗೆ ಚಾಮರಾಜೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾಪಿಗಳ ಈ ಕೃತ್ಯಕ್ಕೆ ಸ್ಥಳೀಯರ ಹಿಡಿಶಾಪ ಹಾಕುತ್ತಿದ್ದಾರೆ. ಸ್ಥಳದಲ್ಲಿ ಜನರು ಜಮಾವಣೆಗೊಂಡಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಸ್ಥಳಕ್ಕೆ ಹಿಂದೂ ಕಾರ್ಯಕರ್ತರು ಧಾವಿಸಿದ್ದು, ಕೃತ್ಯವನ್ನು ಖಂಡಿಸಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಸಂಸದ ಪಿ ಸಿ ಮೋಹನ್ ಅವರು ಭೇಟಿ ನೀಡಿದ್ದು, ಮಾತುಕತ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ಕೃತ್ಯ. ಗೋವುಗಳನ್ನ ದೇವರು ಎಂದು ಪೂಜೆ ಮಾಡುತ್ತೇವೆ. ಆದರೆ, ಕಿಡಿಗೇಡಿಗಳು ಗೋವುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ ಎಸಗಿದ್ದಾರೆ. ಕೂಡಲೇ ಕಿಡಿಗೇಡಿಗಳ ಬಂಧನವಾಗಬೇಕು. ಈ ಸರ್ಕಾರ ಬಂದ ಮೇಲೆ ಇದೆಲ್ಲಾ ಆಗುತ್ತಿದೆ. ಕಿಡಿಗೇಡಿಗಳ ಬಂಧನವಾಗುವವರೆಗೆ ಹೋರಾಟ ನಿಲುವುದಿಲ್ಲ ಎಂದು ಹೇಳಿದ್ದಾರೆ.

ಪೊಲೀಸರ ಜೊತೆ ಮಾತಾನಾಡಿದ್ದೇನೆ. ಇಲ್ಲಿ ಸಿಸಿಟಿವಿಗಳು ಇಲ್ಲ. ಸಿಸಿಟಿವಿ ಹಾಕಿದರೆ ಕಿತ್ತು ಹಾಕುತ್ತಾರೆ. ಇದೀಗ ನನ್ನ ಎಂಪಿ ಫಂಡ್‌ ನಿಂದ ಸಿಸಿಟಿವಿ ಹಾಕೋಕೆ ವ್ಯವಸ್ಥೆ ಮಾಡುತ್ತೇನೆಂದು ತಿಳಿಸಿದರು.

ಈ ನಡುವೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದೆ.

ಗೃಹ ಸಚಿವ ಜಿ.ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿ, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಪೊಲೀಸರಿಂದ ವರದಿ ಕೇಳಲಾಗಿದ್ದು, ವರದಿ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು