LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಹಾರಾಣಿ ವಿಶ್ವವಿದ್ಯಾಲಯಕ್ಕೆ ಉಪ ಲೋಕಾಯುಕ್ತರ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಮತ್ತು ಬಿ.ವೀರಪ್ಪಭೇಟಿ, ಪರಿಶೀಲನೆ

ಬೆಂಗಳೂರು: ಮಹಾರಾಣಿ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಗುರುವಾರ ದಿಢೀರ್‌ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಮತ್ತು ಬಿ.ವೀರಪ್ಪ ಅವರು, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಇರುವ ಕುಂದುಕೊರತೆಗಳನ್ನು ಪರಿಶೀಲಿಸಿ, ಶೀಘ್ರಗತಿಯಲ್ಲಿ ಪರಿಹರಿಸುವಂತೆ ಕುಲಪತಿ, ಉನ್ನತ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದರು.

ಕಾಲೇಜು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಹಲವು ಸಮಸ್ಯೆಗಳಿವೆ ಎಂದು ಕೆಲ ವಿದ್ಯಾರ್ಥಿನಿಯರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದರು. ಇದನ್ನು ಪರಿಗಣಿಸಿದ ಉಪ ಲೋಕಾಯುಕ್ತರು, ವಿವಿಗೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಜೊತೆ ಮಾತನಾಡಿ, ಮಾಹಿತಿ ಪಡೆದುಕೊಂಡರು.

ಇಬ್ಬರೂ ಉಪ ಲೋಕಾಯುಕ್ತರು ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣೆ ವಿಭಾಗದ ಹಾಗೂ ವಿಜ್ಞಾನ ವಿಭಾಗದ ಕಾಲೇಜುಗಳಿಗೆ ಮೊದಲು ಭೇಟಿ ನೀಡಿದರು.

ಎರಡೂ ಕಾಲೇಜುಗಳ ಕಟ್ಟಡಗಳು ಹಳೆಯದಾಗಿದ್ದು, ಕೆಲವೆಡೆ ಶಿಥಿಲವಾಗಿವೆ. ಬಣ್ಣಗಳು ಮಾಸಿರುವುದು, ಕಿಟಕಿ–ಬಾಗಿಲುಗಳು ಹಾಳಾಗಿರುವುದು, ಗೋಡೆಗಳಲ್ಲಿ ನೀರು ಸೋರುತ್ತಿರುವುದು ಹಾಗೂ ಗೋಡೆಗಳ ಮೇಲೆ ಗೀಚುಬರಹ ಇರುವುದನ್ನು ಗಮನಿಸಿದರು.

ವಿವಿಯ ಶೌಚಾಲಯಗಳು ದುರ್ವಾಸನೆ ಬೀರುತ್ತಿದ್ದು, ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸದೇ ಇರುವುದು, ವಿದ್ಯಾರ್ಥಿ ನಿಲಯದಲ್ಲಿ ಸಾಕಷ್ಟು ಕೊಠಡಿಗಳು, ಶೌಚಾಲಯಗಳು ಮತ್ತು ಸ್ನಾನಗೃಹಗಳು ಇಲ್ಲದೇ ಇರುವುದು. ವಿದ್ಯಾರ್ಥಿಗಳಿಗೆ ಸರ್ಕಾರ ಸೂಚಿಸಿದಂತೆ ನಿಯಮಿತ ಮಧ್ಯಂತರದಲ್ಲಿ ಸಿಹಿತಿಂಡಿಗಳು, ಮಾಂಸಾಹಾರಿ ಆಹಾರಗಳು ಮತ್ತು ಮೊಟ್ಟೆಗಳನ್ನು ನೀಡದೇ ಇರುವುದು, ಹಾಸಿಗೆಗಳು, ದಿಂಬುಗಳು ಮತ್ತು ಬೆಡ್‌ಸ್ಪ್ರೆಡ್‌ ಗಳನ್ನು ಒದಗಿಸದೇ ಇರುವುದು ಕಂಡು ಬಂದಿತು. ಇಲ್ಲದೆ, ಹಾಸ್ಟೆಲ್ ನಲ್ಲಿ ವಿದ್ಯುತ್ ಸಮಸ್ಯೆ, ಕುಡಿಯುವ ನೀರುವ ಪೂರೈಕೆಯಲ್ಲಿ ಕೊರತೆಯಾಗುತ್ತಿರುವುದೂ ಕಂಡು ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಉಪಲೋಕಾಯುಕ್ತರು ಇವುಗಳನ್ನು ಶೀಘ್ರವೇ ಸರಿಪಡಿಸಬೇಕು ಎಂದು ಸಂಬಂಧಿತರಿಗೆ ಸೂಚಿಸಿದರು. ಈ ಅವ್ಯವಸ್ಥೆಗಳ ಬಗ್ಗೆ ತನಿಖೆ ನಡೆಸಿ, ವರದಿ ನೀಡಿ ಎಂದು ಲೋಕಾಯುಕ್ತದ ಹೆಚ್ಚುವರಿ ರಿಜಿಸ್ಟ್ರಾರ್‌ಗೆ ಸೂಚಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು