LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಹಾರಾಷ್ಟ್ರ: ಬಿಜೆಪಿ ಶಾಸಕಾಂಗ ಪಕ್ಷ ನಾಯಕರಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ, ನಾಳೆ ಸಿಎಂ ಆಗಿ ಪ್ರಮಾಣ ವಚನ, ಶಿಂಧೆ ಡಿಸಿಎಂ

ಮುಂಬೈ: ವಾರಗಳ ನಂತರ ಮಹಾರಾಷ್ಟ್ರ ಸರ್ಕಾರ ರಚನೆಗೆ ತಾರ್ಕಿಕ ಅಂತ್ಯ ಕಾಣುತ್ತಿದೆ. ಇಂದು ಬುಧವಾರ ಮುಂಬೈಯಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ಅವರ ಹಾದಿ ಸುಗಮವಾಗಿದೆ.

ನಾಳೆ ಸಂಜೆ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಫಡ್ನವೀಸ್ ಅವರ ಹೆಸರನ್ನು ಶಾಸಕ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಲಾಯಿತು. ಮಹಾಯುತಿ ಒಕ್ಕೂಟದ ನಾಯಕರು ಇಂದು ಅಪರಾಹ್ನ 3.30ಕ್ಕೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ತಿಳಿಸಿದ್ದಾರೆ.

ಮುಂಬೈನ ವಿಧಾನ ಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಉಪಸ್ಥಿತರಿದ್ದರು. ಈ ಸಭೆಗೆ ನಿರ್ಮಲಾ ಸೀತಾರಾಮನ್ ಮತ್ತು ರೂಪಾನಿ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ಬಿಜೆಪಿ ನೇಮಿಸಿತ್ತು.

ಬಿಜೆಪಿ ನೇತೃತ್ವದ ಹೊಸ ಮಹಾಯುತಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲು ಏಕನಾಥ್ ಶಿಂಧೆ ಒಪ್ಪಿಕೊಂಡಿದ್ದಾರೆ ಎಂದು ಇಂಡಿಯಾ ಟುಡೇ ಮತ್ತು ನ್ಯೂಸ್ 18 ವರದಿ ಮಾಡಿವೆ.

ಶಿಂಧೆ ಮತ್ತು ಫಡ್ನವಿಸ್ ನಡುವೆ ನಿನ್ನೆ ನಡೆದ ಒಂದು ಗಂಟೆ ಅವಧಿಯ ಸಭೆಯ ವಿವರಗಳು ಅಸ್ಪಷ್ಟವಾಗಿದ್ದರೂ, ಕೆಲವು ರಾಜಕೀಯ ವೀಕ್ಷಕರು ಇದನ್ನು ಬಿಜೆಪಿಯು ಶಿವಸೇನೆ ನಾಯಕರನ್ನು ಸಮಾಧಾನಪಡಿಸುವ ಪ್ರಯತ್ನವೆಂದು ಹೇಳಿದ್ದಾರೆ. ಆದರೆ ಇದು ನಾಳೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭ ಕುರಿತು ಎಂದು ಹೇಳಲಾಗುತ್ತಿದೆ.

ನವೆಂಬರ್ 20 ರಂದು ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ರಾಜ್ಯದ 288 ವಿಧಾನಸಭಾ ಸ್ಥಾನಗಳಲ್ಲಿ 132 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿತು, ಅದರ ಮಿತ್ರಪಕ್ಷಗಳಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಉಳಿದ ಸ್ಥಾನಗಳನ್ನು ಪಡೆದುಕೊಂಡು ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು 230 ಸ್ಥಾನಗಳ ಬಹುಮತವನ್ನು ಹೊಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು