LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಹಿಳಾ ಜಾಗೃತಿ ಮಹಾಸಮಾವೇಶ

ಕನಕಪುರ: ಕನಕಾಂಬರಿ ಮಹಿಳಾ ಒಕ್ಕೂಟದಿಂದ ಬ್ರಹತ್ ಮಹಿಳಾ ಜಾಗೃತಿ ಮಾಹ ಸಮಾವೇಶವನ್ನು ನ.24 ರಂದು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷೆ ಗಂಗಮ್ಮ ತಿಳಿಸಿದರು.ನಗರದ ಕನಕ ಆಸ್ಪತ್ರೆ ರಸ್ತೆಯಲ್ಲಿರುವ ಕನಕಾಂಬರಿ ಮಹಿಳಾ ಒಕ್ಕೂಟದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಕನಕಂಬರಿ ಮಹಿಳಾ ಒಕ್ಕೂಟ ಉತ್ತಮವಾಗಿ ನಡೆದುಕೊಂಡು ಬಂದಿದ್ದು ಆರ್ಥಿಕ ವಾಗಿಯೂ ಸದೃಡವಾಗಿದೆ,

7 ಸಾವಿರಕ್ಕೂ ಹೆಚ್ಚು ಸದಸ್ಯರನ್ನ ಹೊಂದಿರುವ ಕನಕಾಂಬರಿ ಮಹಿಳಾ ಒಕ್ಕೂಟ ದಿಂದ ಪ್ರತಿ 3 ವರ್ಷಗಳಿಗೊಮ್ಮೆ ಮಹಿಳೆಯರಿಗೆ ಜಾಗೃತಿ ಸಮಾವೇಶ ಮಾಡಿಕೊಂಡು ಬಂದಿದ್ದು ಕೋವಿಡ್ ಕಾರಣ ದಿಂದ ಕಳೆದ 5 ವರ್ಷಗಳಿಂದ ಸಮಾವೇಶ ನಡೆಸಲು ಸಾಧ್ಯವಾಗದೆ ಈ ವರ್ಷ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಮ್ಮ ಕನಕಾಂಬರಿ ಮಹಿಳಾ ಒಕ್ಕೂಟದಿಂದ ತಾಲೂಕಿ ನಲ್ಲಿ ನೂರಾರು ಕುಟುಂಬಗಳಿಗೆ ಅನುಕೂಲವಾಗಿದ್ದು ಜೀವನೋಪಾಯಕ್ಕೆ ವ್ಯಾಪಾರ, ಕೃಷಿ, ಉದ್ಯಮಕ್ಕಾಗಿ ಸುಮಾರು 15 ಕೋಟಿ ಯಷ್ಟು ಸಾಲವನ್ನು ಬ್ಯಾಂಕುಗಳ ಮೂಲಕ ಒಕ್ಕೂಟದ ಸದಸ್ಯರಿಗೆ ಕೊಡಿಸುತ್ತಾ ಬಂದಿದ್ದು ಒಕ್ಕೂಟದ ಗೌರವ ಅಧ್ಯಕ್ಷರಾಗಿರುವ ಎಚ್.ಕೆ.ಶ್ರೀಕಂಠು ಅವರ ಸಹಕಾರ ಹಾಗೂ ಮಾರ್ಗದರ್ಶನದಿಂದ ಸಂಸ್ಥೆ ಯ ಪ್ರಗತಿ ಹೊಂದಲು ಸಾಧ್ಯವಾಗಿದೆ ಎಂದರು.

ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಮಾಯಣ್ಣ ಮಾತನಾಡಿ ಗೌರವಾಧ್ಯಕ್ಷ ಶ್ರೀಕಂಠು ಅವರ ಜನ್ಮದಿನ ಅಂಗವಾಗಿ ಅವರ ಅಭಿಮಾನಿ ಬಳಗದವರು ವಿದ್ಯಾರ್ಥಿ ಗಳಿಗೆ 8 ಲಕ್ಷದಷ್ಟು ವಿದ್ಯಾರ್ಥಿ ವೇತನ, 7 ಲಕ್ಷ ವೆಚ್ಚದಲ್ಲಿ ನೂರು ಜನರಿಗೆ ಹೊಲಿಗೆ ಯಂತ್ರ, 2 ಲಕ್ಷ ವೆಚ್ಚದಲ್ಲಿ ಅಂಗವಿಕಲರಿಗೆ ಉಪಯೋಗವಾಗುವ ಸಲಕರಣೆಗಳನ್ನು ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದುಡಾ ಚಂದ್ರಮ್ಮ ದಯಾನಂದ ಸಾಗರ್ ಆಸ್ಪತ್ರೆಯ ವತಿ ಯಿಂದ ಡೆಂಟಲ್ ತಪಾಸಣೆ ಬಿಪಿ ಶುಗರ್ ತಪಾಸಣೆ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ನಿರಂಜನ್ ಅವರ ನೇತೃತ್ವದಲ್ಲಿ ಅನೀಮಿಯಾ ತಪಾಸಣೆ ಮತ್ತು ಚಿಕಿತ್ಸೆ, ವೈಷ್ಣವಿ ಲಯನ್ಸ್ ವತಿಯಿಂದ ನೇತ್ರ ತಪಾಸಣೆ ಮತ್ತು ಸ್ಥಳದಲ್ಲಿಯೇ ಕನ್ನಡಕ ವಿತರಣೆ ನಡೆಯಲಿದೆ ತಾಲ್ಲೂಕಿನ ಮಹಿಳೆಯರ ಶಕ್ತಿಯಾಗಿ ನಡೆಯುತ್ತಿರುವ ಈ ಮಹಿಳಾ ಜಾಗೃತಿ ಮಹಾಸಮಾವೇಶದಲ್ಲಿ ಒಕ್ಕೂಟದ ಸದಸ್ಯರ ಲ್ಲದೆ ತಾಲ್ಲೂಕಿನ ಮಹಿಳೆಯರು ಪಾಲ್ಗೊಂಡು ಆರೋಗ್ಯ ತಪಾಸಣಾ ಶಿಬಿರದಲ್ಲಿ ಆರೋಗ್ಯ ಪರೀಕ್ಷೆ ಮಾಡಿಸಿ ಕೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಒಕ್ಕೂಟದ ಕಾರ್ಯದರ್ಶಿ ಕೆ.ಸಿ.ಕವಿತ ಮಾತನಾಡಿ ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕರು ಆದ ಡಿಸಿಎಂ ಡಿ.ಕೆ.ಶಿವಕುಮಾರ್ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಒಕ್ಕೂಟದ ಗೌರವಾಧ್ಯಕ್ಷ ಎಚ್.ಕೆ. ಶ್ರೀಕಂಠು ವಹಿಸಲಿದ್ದಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಮಾಜಿ ಸಂಸದ ಡಿ.ಕೆ.ಸುರೇಶ್, ವಿಧಾನಪರಿಷತ್ ಸದಸ್ಯ ಎಸ್.ರವಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ನಮ್ಮ ಒಕ್ಕೂಟದ ಸುಮಾರು 7 ಸಾವಿರ ಸದಸ್ಯರು ತಪ್ಪದೇ ಭಾಗವಹಿಸುವಂತೆ ಮನವಿಯನ್ನು ಮಾಡಿದರು.ಒಕ್ಕೂಟದ ನಿರ್ದೇಶಕರಾದ ಚಿಕ್ಕತಾಯಮ್ಮ, ಪ್ರೇಮ, ರೇಣುಕಮ್ಮ, ಚಂದ್ರಕಲಾ, ರತ್ನಮ್ಮ, ಪರಿಮಳ, ಕಾಂತಮ್ಮ, ಜಯಶೀಲ, ನಾಗರತ್ನಮ್ಮ, ರತ್ನಮ್ಮ ಹಾಗೂ ನೌಕರರು ಸಿಬ್ಬಂದಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು