LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಿರುವುದಕ್ಕೆ ಮೋದಿ ಸರ್ಕಾರ ಕಾರಣ: ಕಾಂಗ್ರೆಸ್

ನವದೆಹಲಿ: ಕ್ರೋನಿಸಂ( ಆಪ್ತರಿಗೆ ಮಣೆ) ಅನಿಯಮಿತ ನೀತಿಗಳು ಮತ್ತು ಪಕ್ಷಪಾತದ ಆದ್ಯತೆಗಳಿಂದ ದೇಶದಲ್ಲಿ ಚಿನ್ನದ ಸಾಲ ಪಡೆದು ಮರು ಪಾವತಿಸದವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ

ಮೋದಿ ಸರ್ಕಾರ ಮಹಿಳೆಯರಿಂದ ಮಂಗಳಸೂತ್ರ ಕಸಿಯಲು ಪ್ರಮುಖ ಕಾರಣವಾಗಿದೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ. ಶೇ. 30 ರಷ್ಟು ಜನರು ಚಿನ್ನದ ಸಾಲ ಮರುಪಾವತಿದೆ ಮಂಗಳ ಸೂತ್ರ ಸೇರಿದಂತೆ ತಮ್ಮ ಚಿನ್ನಾಭರಣ ಕಳೆದುಕೊಳ್ಳುತ್ತಿರುವುದಾಗಿ ಮಹಿಳೆಯರು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಮೋದಿ ಸರ್ಕಾರದ ಕ್ರೋನಿಸಂ ಮತ್ತಿತರ ಕಾರಣಗಳಿಂದ ಸ್ವತಂತ್ರ ಭಾರತದ ಇತಿಹಾಸದಲ್ಲಿ ಮಹಿಳೆಯರಿಂದ ಮಂಗಳಸೂತ್ರಗಳನ್ನು ಕಸಿಯುವ ಏಕೈಕ ಸರ್ಕಾರ ಎಂಬ ಹೆಸರು ಗಳಿಸಿದೆ ಎಂದು ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಮಂಗಳಸೂತ್ರ’ ಕಸಿಯುವ ಕೆಲವು ಕಲ್ಪಿತ ಸಂಚಿನ ಬಗ್ಗೆ 'ಅಜೈವಿಕ ಪ್ರಧಾನಿ' ಹೆದರುತ್ತಿದ್ದ ಸಮಯದಲ್ಲಿ, ನಾವು ಅವರ ಅಧಿಕಾರಾವಧಿಯಲ್ಲಿ ಚಿನ್ನದ ಸಾಲಗಳ ತ್ವರಿತ ಏರಿಕೆಯ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ಭಾರತೀಯ ಕುಟುಂಬಗಳಿಂದ ಅಂದಾಜು ರೂ. 3 ಲಕ್ಷ ಕೋಟಿಯಷ್ಟು ಚಿನ್ನದ ಸಾಲಗಳನ್ನು ತೆಗೆದುಕೊಳ್ಳಲಾಗಿದ್ದು, ಇಂದಿನವರೆಗೆ ಇದು ಬಾಕಿ ಉಳಿದಿದೆ ಎಂದು ಹೇಳಲಾಗಿದೆ. ಹೆಚ್ಚುತ್ತಿರುವ ಋಣಭಾರ ಮತ್ತು ನಿಧಾನಗತಿಯ ಆರ್ಥಿಕತೆಯೊಂದಿಗೆ ಚಿನ್ನದ ಸಾಲ ಪಡೆದು ಮರುಪಾವತಿಸದರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ.

"ಮಾರ್ಚ್ ಮತ್ತು ಜೂನ್ 2024 ರ ನಡುವಿನ ಮೂರು ತಿಂಗಳ ಅವಧಿಯಲ್ಲಿ ಚಿನ್ನದ ಸಾಲದ ಪಡೆದು ಮರುಪಾವತಿಸದೆ ಇರುವುದು ರೂ.5,149 ಕೋಟಿಗಳಿಂದ ರೂ.6,696 ಕೋಟಿಗೆ ಅಂದರೆ ಶೇ 30 ರಷ್ಟು ಏರಿಕೆಯಾಗಿದೆ. ಈ ಸಾಲ ಮರುಪಾವತಿಸದೆ ಇರುವವರು ಹೆಚ್ಚಾಗಿ ಚಿನ್ನಾಭರಣಗಳನ್ನು ಕಳೆದುಕೊಳ್ಳುತ್ತಾರೆ. ಮಹಿಳೆಯರು ಮಂಗಳಸೂತ್ರ ಮತ್ತಿತರ ಆಭರಣಗಳನ್ನು ಕಳೆದುಕೊಳ್ಳುತ್ತಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು