LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ದೇವೇಗೌಡರಲ್ಲ: ಜಮೀರ್ ಅಹ್ಮದ್ ವಾಗ್ದಾಳಿ

ರಾಮನಗರ: ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದು ಹೆಚ್.ಡಿ.ದೇವೇಗೌಡರಲ್ಲ. ಜನರನ್ನು ದಾರಿ ತಪ್ಪಿಸುವುದು ಬೇಡ ಎಂದು ಸಚಿವ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರ ನಡೆಸಿದ ಜಮೀರ್, ಮೀಸಲಾತಿ ಕೊಟ್ಟಿದ್ದು ದೇವೇಗೌಡರಲ್ಲ. ಅದನ್ನ ವೀರಪ್ಪ ಮೊಯ್ಲಿ ಕೊಟ್ಟಿದ್ದು. ದೇವೇಗೌಡರಿಗೆ ಮನವಿ ಮಾಡ್ತೇನೆ. ಜನರನ್ನು ದಾರಿತಪ್ಪಿಸೋದು ಬೇಡ. 1994 ರಲ್ಲಿ ವೀರಪ್ಪ ಮೊಯ್ಲಿ ಕೊಟ್ಟಿದ್ದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಮೀಸಲಾತಿ ಕುರಿತು ವರದಿ ಕಳುಹಿಸಿದ್ರು. ಆಗ ಸರ್ಕಾರ ಹೋಯ್ತು. ಸರ್ಕಾರ ಹೋದ ಮೇಲೆ ದೇವೇಗೌಡರು ಬಂದ್ರು. ವೀರಪ್ಪ ಮೊಯ್ಲಿ ಶೇ. 6ಕ್ಕೆ ರೆಕ್ಮೆಂಡ್ ಮಾಡಿದ್ದರು. ಆದ್ರೆ ದೇವೇಗೌಡರು ಕೊಟ್ಟಿದ್ದು ಕೇವಲ ಶೇ 4 ರಷ್ಟು ನಮಗೆ ದೇವೇಗೌಡರು ಮೋಸ ಮಾಡಿದ್ದಾರೆ.

ದೇವೇಗೌಡರಿಗೆ ಜಮೀರ್ ಅಹಮದ್ ಟಾಂಗ್ ಕೊಡುತ್ತಾ, 25 ರಿಂದ 30 ಸಾವಿರ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ಕುಮಾರಸ್ವಾಮಿಗೆ ಮುಸ್ಲಿಂ ವೋಟ್ ಬೇಕಿಲ್ಲ. ಅಲ್ಪಸಂಖ್ಯಾತರ ವೋಟ್ ಬೇಕಿಲ್ಲ. ಅವರು ಮಾತಾಡಿರೋ ವೀಡಿಯೋ ಇದೆ. ಯಾವ ಮುಖ ಇಟ್ಕೊಂಡು ಮುಸಲ್ಮಾನರ ವೋಟ್ ಕೇಳ್ತಾರೆ? ಯತ್ನಾಳ್ ಮುಸಲ್ಮಾನರು, ಗಡ್ಡ ಬಿಟ್ಟವರು, ಟೋಪಿ ಹಾಕಿದವ್ರು ನಮ್ಮ ಹತ್ತಿರ ಬರೋದು ಬೇಡ ಅಂತ ಹೇಳಿದ್ದಾರೆ. ಅವರನ್ನ ಒಪ್ಪಿಸೋಕೆ ಹೇಳಿ ಬಿಜೆಪಿ ಅವರು ಮುಸಲ್ಮಾನರ ಪರವಾಗಿದ್ದೆವು ಎಂದು ಒಪ್ಪಿಸಲು ಹೇಳಿ. ಆಗ ಮುಸಲ್ಮಾನರು ಅವರ ಪಕ್ಷಕ್ಕೆ ವೋಟ್ ಹಾಕಲು ಚಿಂತನೆ ಮಾಡ್ತಾರೆ ಎಂದರು. ಯೋಗೇಶ್ವರ್ ಈ ತಾಲೂಕಿನಲ್ಲಿ ಕೆಲಸ ಮಾಡಿದ್ದಾರೆ. ಕೆರೆ ತುಂಬಿಸಿ ಬಹಳಷ್ಟು ಅಭಿವೃದ್ಧಿ ಕೆಲಸ ಮಾಡ್ತಾ ಇದ್ರು ಅಂತ ಜನ ಹೇಳ್ತಾ ಇದ್ದಾರೆ. ಭಾವನಾತ್ಮಕವಾಗಿ ಮತ ಕೇಳೋದು ಅವರಿಗೆ ಮೊದಲಿನಿಂದಲೂ ಬಂದಿದೆ ಎಂದು ಆರೋಪಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು