LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಮೆಜೆಸ್ಟಿಕ್-2' 126 ದಿನಗಳ ಚಿತ್ರೀಕರಣ

ಈಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ, ಅಲ್ಲಿ ನಡೆಯುವ ದಂಧೆಗಳು, ಅಕ್ರಮ ಚಟುವಟಿಕೆಗಳು ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯನ್ನು ಮೆಜೆಸ್ಟಿಕ್-2 ಚಿತ್ರದ ಮೂಲಕ ನಿರ್ದೇಶಕ ರಾಮು ಹೇಳಹೊರಟಿದ್ದಾರೆ.

ಹೀಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲದಂಥ ಅನೇಕ ಚಟು ವಟಿಕೆಗಳನ್ನು ಮೆಜೆಸ್ಟಿಕ್-2 ಅನಾವ ರಣಗೊಳಿಸಲಿದೆ. ಇದೀಗ ಈ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ.ಅಮ್ಮಾ ಎಂಟರ್ ಪ್ರೈಸಸ್ ಮೂಲಕ ಚಿತ್ರದುರ್ಗದ ಹೆಚ್.ಆನಂದಪ್ಪ ಅವರ ನಿರ್ಮಾಣದ ಈ ಚಿತ್ರಕ್ಕೆ ರಾಮು ಅವರೇ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಯುವನಟ ಭರತ್, ಸಂಹಿತಾ ವಿನ್ಯಾ ನಾಯಕ, ನಾಯಕಿ ಪಾತ್ರ ನಿರ್ವಹಿಸಿದ್ದಾರೆ.

ಮೋಷನ್ ಪೋಸ್ಟರ್ ಬಿಡುಗಡೆಯ ಜೊತೆ ಶೂಟಿಂಗ್ ಅನುಭವಗಳ ಹೇಳಿಕೊಳ್ಳಲು ಇಡೀ ಚಿತ್ರತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು.
ಮೊದಲಿಗೆ ಮಾತನಾಡಿದ ನಿರ್ಮಾಪಕ ಹೆಚ್. ಆನಂದಪ್ಪ, ಮಾರ್ಚ್ 31ಕ್ಕೆ ನಮ್ಮ ಚಿತ್ರದ ಶೂಟಿಂಗ್ ಆರಂಭಿಸಿ, ಬೆಂಗಳೂರು ಸುತ್ತಮುತ್ತ ನಿರಂತರವಾಗಿ, ಅಲ್ಲದೆ ಮರುಘಾ ಮಠದಲ್ಲಿ ಡ್ಯುಯೆಟ್ ಸಾಂಗ್ ಚಿತ್ರೀಕರಣ ಮಾಡಿದ್ದು, ಅಂ ದುಕೊಂಡಂತೆಯೇ ಮುಗಿದಿದೆ. ಇಡೀ ಸಿನಿಮಾ ಶೂಟಿಂಗ್ನಲ್ಲಿ ನಾನೇ ಜೊತೆ ಇದ್ದು ನೋ ಡಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ ಎಂದರು.

ನಿರ್ದೇಶಕ ರಾಮು ಮಾತನಾಡಿ ಸತತವಾಗಿ 126 ದಿನ ಶೂಟಿಂಗ್ ಮಾಡಿದ್ದೇವೆ. ನನ್ನ ಸಬ್ಜೆಕ್ಟ್ ಕೇಳಿ ಅವಕಾಶ ಕೊಟ್ಟಿದ್ದು ಆನಂದಪ್ಪ ಅವರು. ನಾನು ಏನು ಕೇಳಿದೆನೋ ಅದೆಲ್ಲವನ್ನೂ ಒದಗಿಸಿಕೊಟ್ಟು ಸಹಕರಿಸಿದ್ದಾರೆ. ಮೊದಲ ಚಿತ್ರಕ್ಕೇ ಇಂಥ ನಿರ್ಮಾಪಕರು ಸಿಕ್ಕಿದ್ದು ನನ್ನ ಅದೃಷ್ಟ. ಈಗ ಡಬ್ಬಿಂಗ್ ಆರಂಭಿಸಬೇಕಿದೆ. ಚಿತ್ರವನ್ನು ಡಿಸೆಂಬರ್ 26ಕ್ಕೆ ರಿಲೀಸ್ ಮಾಡಬೇಕೆಂಬ ಪ್ಲಾನಿದೆ. ನಾನು, ಭರತ್ ಇಬ್ಬರೂ ದರ್ಶನ್ ಅಭಿಮಾನಿಗಳು.

ರಿಲೀಸ್ ಟೈಮಲ್ಲಿ ಮೈಸೂರಿನಿಂದ ಬೆಂಗಳೂರುವರೆಗೆ 101 ಸ್ಟಾರ್ಸ್ ಮೆರವಣಿಗೆ ಮಾಡಿಸಬೇಕು, ದರ್ಶನ್ ಅವರ 101 ಅಡಿ ಕಟೌಟ್ ಹಾಕಬೇಕು ಎಂಬ ಪ್ಲಾನಿದೆ ಎಂದರು.ಈ ಚಿತ್ರಕ್ಕೆ ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಸೇರಿದಂತೆ ಬಹುತೇಕ ಬೆಂಗ ಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.ರೌಡಿಸಂ ಹಾಗೂ ಆಕ್ಷನ್ ಬೇಸ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಹಿರಿಯನಟಿ ಶೃತಿ ಅವರು ತಾಯಿಯ ಪಾತ್ರ ನಿರ್ವಹಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ವಿನು ಮನಸು ಅವರ ಸಂಗೀತ ನಿರ್ದೇಶನವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು