LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೇಲ್ಮನೆಯಲ್ಲಿ ಕಲಹ

ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನಕ್ಕೊ ಮೊದಲು ಪೂರ್ವ ಭಾವಿ ಎನ್ನುವಂತೆ ರಾಜ್ಯದ ಆಡಳಿತದ ಶಕ್ತಿ ಕೇಂದ್ರದಲ್ಲಿ ಗುರುವಾರ ಮಿನಿ ಚಳಿಗಾಲದ ಅಧಿವೇಶನ ಆರಂಭಗೊಂಡಿದೆ. ಇದೇನು ಚಳಿಗಾಲದ ಅಧಿವೇಶನ ಈ ಬಾರಿ ಬೆಂಗಳೂರಿನಲ್ಲಿ ಅಂದುಕೊಂಡರೆ ಅದು ತಪ್ಪು.

ಇಷ್ಟೆಲ್ಲ ಪೀಠಿಕೆ ಹಾಕಲಿಕ್ಕೆ ಕಾರಣ ವಿಧಾನಪರಿಷತ್‍ನಲ್ಲಿ ಹೊಸದಾಗಿ ಸೃಷ್ಟಿಯಾಗಿಯಾಗಿರುವ ಕಾರ್ಯದರ್ಶಿ - 2ರ ಹುದ್ದೆ. ಈವರೆಗೆ ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಕಾರ್ಯದರ್ಶಿ ಹುದ್ದೆ ಒಂದು ಮಾತ್ರ ಇತ್ತು. ಆದರೆ ವಿಧಾನಪರಿಷತ್‍ನಲ್ಲಿ ಕಳೆದ ತಿಂಗಳು ಪರಿಷತ್‍ನ ಸಭಾಪತಿ ಬಸವರಾಜ ಹೊರಟ್ಟಿಯವರು ಕಾರ್ಯದರ್ಶಿ ಹುದ್ದೆಯನ್ನು ಆಡಳಿತಾತ್ಮಕ ಹಾಗೂ ಕಾನೂನು ದೃಷ್ಠಿಯಿಂದ ಈ ಹಿಂದೆ ಇದ್ದ ಕಾರ್ಯದರ್ಶಿ 2 ಹುದ್ದೆಯನ್ನು ಮರು ಸೃಷ್ಟಿಸಿದರು. ಪರಿಷತ್ತಿನಲ್ಲಿ ಎರಡು ಹುದ್ದೆಯನ್ನು ಸೃಷ್ಟಿ ಮಾಡಿದ್ದೆ ಈ ಮಿನಿ ಅಧಿವೇಶನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ವಿಧಾನ ಪರಿಷತ್ತಿನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಮಹಾಲಕ್ಷ್ಮಿ ಅವರ ಹುದ್ದೆಗೆ ಪರ್ಯಾಯವಾಗಿ ಕಾರ್ಯದರ್ಶಿ 2ರ ಹುದ್ದೆಗೆ ನಿರ್ಮಲಾ ಅವರನ್ನು ಬಡ್ತಿ ಕೊಟ್ಟು ಹೊಸ ಹುದ್ದೆ ಸೃಷ್ಟಿ ಮಾಡಿದ್ದೆ ಈ ಅವಾಂತರಕ್ಕೆ ಕಾರಣ ಎಂದು ಪರಿಷತ್ತಿನ ಮೊಗಸಾಲೆಯಲ್ಲಿ ಕೇಳಿ ಬರುತ್ತಿದೆ. ಗುರುವಾರ ಮಧ್ಯಾಹ್ನ ಪರಿಷತ್ತಿನ ನೌಕರರ ಸಂಘದ ಪದಾಧಿಕಾರಿಯೊಬ್ಬ ಕಾರ್ಯದರ್ಶಿ ಮಹಾಲಕ್ಷ್ಮಿ ಅವರ ಕೊಠಡಿಯಲ್ಲಿ ಹೊಸದಾಗಿ ಸೃಷ್ಟಿಯಾದ ಕಾರ್ಯದರ್ಶಿ 2 ಹುದ್ದೆಗೆ ನೇಮಕಗೊಂಡಿರಿವ ನಿರ್ಮಲ ಅವರ ವಿರುದ್ಧ ಕೆಲವರು ಏರುಧ್ವನಿಯಲ್ಲಿ ಮಾತನಾಡಿ ಅವರ ವಿರುದ್ಧ ಹರಿಹಾಯ್ದಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು