LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮೈಸೂರು ರಾಜಮನೆತನಕ್ಕೆ 6 ವಾರಗಳಲ್ಲಿ 3 ಸಾವಿರ ಕೋಟಿ ನೀಡಬೇಕಿರುವ ರಾಜ್ಯ ಸರ್ಕಾರ!

ಬೆಂಗಳೂರು: ಜಯಮಹಲ್ ರಸ್ತೆ ಮತ್ತು ಬಳ್ಳಾರಿ ರಸ್ತೆಗೆ ಹೊಂದಿಕೊಂಡಿರುವ 15 ಎಕರೆ 39 ಗುಂಟಾ ಭೂಮಿ ಸ್ವಾಧೀನ ಪ್ರಕ್ರಿಯೆಗಾಗಿ ಮೈಸೂರು ಮಹಾರಾಜರ ವಾರಸುದಾರರಿಗೆ ರಾಜ್ಯ ಸರ್ಕಾರ 6 ವಾರಗಳಲ್ಲಿ 3,000 ಕೋಟಿ ರೂಪಾಯಿ ಪರಿಹಾರ ನೀಡಬೇಕಿದೆ.

ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರದ ರೂಪದಲ್ಲಿ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ತೀರ್ಪು, ಸರ್ಕಾರ ತೆಗೆದುಕೊಂಡಿದ್ದ ಇತ್ತೀಚಿನ ನಿಲುವಿಗೆ ವಿರುದ್ಧವಾಗಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ಬಳ್ಳಾರಿ ರಸ್ತೆಗೆ ಹೊಂದಿಕೊಂಡಂತೆ ಇರುವ ಬೆಂಗಳೂರು ಅರಮನೆ ಭೂಮಿಗೆ ಬಿಬಿಎಂಪಿ ಪ್ರತಿ ಚದರ ಅಡಿಗೆ 2,83,500 ರೂಪಾಯಿ, ಜಯಮಹಲ್ ರಸ್ತೆಯಲ್ಲಿರುವ ಭೂಮಿಗೆ ಪ್ರತಿ ಚದರ ಅಡಿಗೆ 2,04,000 ರೂಪಾಯಿ ಮಾರ್ಗಸೂಚಿ ಮೌಲ್ಯವನ್ನು ನಿಗದಿಪಡಿಸಬೇಕಾಗುತ್ತದೆ. ಇದು ಪ್ರತಿ ಎಕರೆಗೆ 194 ಕೋಟಿ ರೂಪಾಯಿಯಾಗಲಿದ್ದು, ಒಟ್ಟು ಭೂಸ್ವಾಧೀನ ಪ್ರಕ್ರಿಯೆಗೆ ಒಟ್ಟು 3000 ಕೋಟಿ ರೂಪಾಯಿ ಪರಿಹಾರ ನೀಡಬೇಕಾಗುತ್ತದೆ.

ಸುಮಾರು 3 ಲಕ್ಷ ಚದರ ಮೀಟರ್‌ನ ಹೆಚ್ಚುವರಿ ನಿರ್ಮಾಣ ಪ್ರದೇಶವನ್ನು ನಿರ್ಮಿಸಲು 3,000 ಕೋಟಿ ರೂಪಾಯಿ ಮೌಲ್ಯದ TDR ಪ್ರಮಾಣಪತ್ರಗಳನ್ನು ಬಿಲ್ಡರ್‌ಗಳು ಲೋಡ್ ಮಾಡಬಹುದಾಗಿದ್ದು, ಈ ಪ್ರದೇಶದಲ್ಲಿ ಬಹುಮಹಡಿ ಕಟ್ಟಡಗಳು ತಲೆ ಎತ್ತಲಿವೆ.

ಏಪ್ರಿಲ್ 2024 ರಲ್ಲಿ, ರಾಜ್ಯ ಸರ್ಕಾರ ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯಿದೆ 1996 ರ ಪ್ರಕಾರ ಪ್ರತಿ ಚದರ ಮೀಟರ್‌ಗೆ ರೂ 120.68 ರಂತೆ ಅರಮನೆಯ ಭೂಮಿಯ ಮೌಲ್ಯವನ್ನು ನಿರ್ಧಾರ ಮಾಡಿತ್ತು. ಸರ್ವೋಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ, ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಲು ಪಕ್ಕದ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಮಾರ್ಗದರ್ಶಿ ಮೌಲ್ಯವನ್ನು ಗಣನೆಗೆ ತೆಗೆದುಕೊಂಡಿದೆ ಇದು ಸರ್ಕಾರದ ಅಂದಾಜುಗಿಂತ ಸರಿಸುಮಾರು 2,00,000 ಪಟ್ಟು ಹೆಚ್ಚಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು