LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮೋಟಗೊಂಡನಹಳ್ಳಿ 2024-25 ಸಾಲಿನ ಗ್ರಾಮ ಸಭೆ: ವಿವಿಧ ಇಲಾಖೆ ಅಧಿಕಾರಿಗಳು ಗೈರು: ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

ನೆಲಮಂಗಲ: ಸೋಲೂರು ಹೋಬಳಿ ಮೋಟಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ಹಾಗೂ 2024-25ನೇ ಸಾಲಿನ ಗ್ರಾಮಸಭೆಯನ್ನು ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಆಯೋಜಿಸಲಾಗಿತ್ತು.

ಸಭೆಗೆ ಅನೇಕ ಇಲಾಖೆಯ ಅಧಿಕಾರಿಗಳು ಬಾರದ ಕಾರಣ, ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಬೇಕಿದ್ದ ಗ್ರಾಮಸಭೆಯಲ್ಲಿ ಅಧಿಕಾರಿಗಳು ಭಾಗವಹಿಸದೆ ಕಾಟಾಚಾರಕ್ಕೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಮುಂದಿನಸಭೆಗಳಿಗೆ ಹಾಜರಾಗಲು ಸಂಬಂದಿಸಿದ ಇಲಾಖೆಯವರಿಗೆ ಪತ್ರವ್ಯವಹಾರ ಮಾಡುವಂತೆ ಹಾಜರಿದ್ದ ಗ್ರಾಮಸ್ಥರು ತಿಳಿಸಿದರು. ಸಭೆಯಲ್ಲಿ ಹಾಜರಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಮಾಹಿತಿಯನ್ನು ಸಮಗ್ರವಾಗಿ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಧ್ವನಿ ಎತ್ತಿದ ಗ್ರಾಮಸ್ಥರು ಗ್ರಾಮದಲ್ಲಿ ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಸಾರ್ವಜನಿಕರಿಗೆ ಆಗುತ್ತಿರುವ ಸಾಕಷ್ಟು ತೊಂದರೆಗಳ ಬಗ್ಗೆ
ಆಕ್ರೋಶ ವ್ಯಕ್ತಪಡಿಸಿ ಶೀಘ್ರದಲ್ಲೇ ಸಾರ್ವಜನಿಕರಿಗೆ ಆಸ್ಪತ್ರೆಯಿಂದ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿಗ್ರಾಮದ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿ ಮೂಲಭೂತ ಸೌಕರ್ಯ ಒದಗಿಸಿ ಕೊಡುವಂತೆ ಒತ್ತಾಯಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷ ಎಂ ಆರ್ ಶಿವಕುಮಾರ್ ಮಾತಾನಾಡಿ ಸಭೆಯಲ್ಲಿ ಚರ್ಚೆಯಾದ ಎಲ್ಲಾ ವಿಷಯಗಳನ್ನು ಈಗಾಗಲೇ ನೋಂದಣಿ ಪುಸ್ತಕದಲ್ಲಿ ನೋಂದಾಯಿಸಲಾಗಿದೆ. ಅದರ ಮುಖೇನ ಸಂಬಂಧಿಸಿದ ಇಲಾಖೆಯವರಿಗೆ ಪತ್ರವ್ಯವಹಾರ ಮಾಡಲಾಗುವುದು. ಅದರಂತೆ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಯೋಜನೆಯನ್ನು ಕೈಗೊಳ್ಳಲಾಗುವುದು ಈ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕೆಲವು ಮುಖಂಡರು ಗೈರಾಗಿರುವುದು ಕಂಡುಬಂದಿದ್ದು ಮುಂದಿನ ಸಭೆಯಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಮುಖಂಡರನ್ನು ಸೇರಿಸಿ ಸಭೆ ನಡೆಸಲಾಗುವುದು ಎಂದರು.

ಗ್ರಾಮ ಸಭೆ ಜೊತೆಯಲ್ಲಿ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ಆಯೋಜಿಸಿದ್ದು ಮಕ್ಕಳಿಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಈ ಸಭೆ ಉತ್ತಮ ವೇದಿಕೆಯಾಗಿದೆ. ಅಲ್ಲದೆ, ಅಧಿಕಾರಿಗಳಿಗೆ ಮಕ್ಕಳಿಂದ ಸಮಸ್ಯೆ ಕೇಳುವುದೇ ಅದ್ಭುತಅನುಭವ ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಪ್ರಜಾಪ್ರಭುತ್ವದ ಅನುಭವವನ್ನು ನೀಡುತ್ತದೆ. ಸಭೆಯಲ್ಲಿ ಭಾಗವಹಿಸುವ ಮೂಲಕ, ಮಕ್ಕಳು ನಿರ್ಣಾಯಕ ಕೌಶಲ್ಯಗಳನ್ನು ಪಡೆಯುತ್ತಾರೆ ಮಕ್ಕಳು, ತಮ್ಮ ಶಾಲೆಗಳಿಗೆ ಮೂಲಸೌಕರ್ಯ ಮತ್ತು ಸಿಬ್ಬಂದಿ ಅಗತ್ಯತೆಗಳು, ಶುದ್ಧ ಕುಡಿಯುವ ನೀರಿನ ಅಗತ್ಯತೆ, ಮತ್ತು ಇತರೆ ಸಮಸ್ಯೆಗಳಿಗೆ ಕುರಿತು ಚರ್ಚಿಸಿದ್ದಾರೆ ಎಂದರು.ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್ ಉಮೇಶ್ ನಾಯಕ್, ಮಾಜಿ ಅಧ್ಯಕ್ಷೆ ಪದ್ಮಾವತಿ ಜಯರಾಮ್, ಉಪಾಧ್ಯಕ್ಷರು ಸದಸ್ಯರುಗಳು ಗ್ರಾಮಸ್ಥರಾದ ಶಿವರುದ್ರಪ್ಪ, ನಾಗ ರಾಜು ಸೇರಿದಂತೆ ಹಲವರು ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು