LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮೋದಿ ಕಾಲಿಗೆ ಬೀಳಲು ಮುಂದಾದ ಬಿಹಾರ ಸಿಎಂ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ಮತ್ತೆ ಪ್ರಧಾನಿ ನರೇಂದ್ರ ಮೋದಿಯವರ ಕಾಲಿಗೆ ಬೀಳಲು ಯತ್ನಿಸಿದ ಘಟನೆ ದರ್ಬಾಂಗಾದಲ್ಲಿ ನಡೆದಿದೆ.

ಇಂದು ದರ್ಭಾಂಗಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿತೀಶ್ ಕುಮಾರ್ ಅವರು ಮೋದಿಯವರಿಗೆ ಕೈಮುಗಿಯುತ್ತಾ ಅವರ ಕಾಲನ್ನು ಮುಟ್ಟಿ ನಮಿಸಲು ಯತ್ನಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ನಿತೀಶ್ ಕುಮಾರ್ ಅವರು ತಮ್ಮ ಕಾಲನ್ನು ಮುಟ್ಟಲು ಪ್ರಯತ್ನಿಸುತ್ತಿರುವಾಗ ಪ್ರಧಾನಿ ಮೋದಿ ಅದನ್ನು ತಡೆದಿದ್ದು, ಅವರ ಕೈ ಕುಲುಕಿದ್ದಾರೆ.

73 ವರ್ಷದ ಜೆಡಿಯು ಮುಖ್ಯಸ್ಥರ ಈ ವರ್ತನೆಯ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಹಾರ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ತಮಗಿಂತ ಒಂದು ವರ್ಷ ದೊಡ್ಡವರಾದ ಮೋದಿಗೆ ಕಾಲಿಗೆ ಬೀಳುವುದು ಹೊಸ ವಿಚಾರ ಏನಲ್ಲ ಎಂದಿದ್ದಾರೆ.

ಇದರಲ್ಲಿ ವಿಶೇಷವಾದದ್ದು ಏನು ಇದೆ? ಅವರು(ಸಿಎಂ) ಎಲ್ಲರ ಕಾಲಿಗೆ ಬೀಳುವುದು ತಡವಾಗಿದೆ. ಅವರು ತಮ್ಮ ಸರ್ಕಾರದ ಅಧಿಕಾರಿಗಳಿಗೂ ಹಾಗೆ ಮಾಡಿದ್ದಾರೆ" ಎಂದು ಆರ್ ಜೆಡಿ ನಾಯಕ ವ್ಯಂಗ್ಯವಾಡಿದ್ದಾರೆ.

ಈ ವರ್ಷದ ಆರಂಭದಲ್ಲಿ ಕೆಲವು ಕಾರ್ಯಕ್ರಮಗಳಲ್ಲಿ ನಿತೀಶ್ ಕುಮಾರ್ ಅವರು ಐಎಎಸ್ ಅಧಿಕಾರಿಗಳು ಮತ್ತು ಖಾಸಗಿ ಕಂಪನಿಯ ಎಂಜಿನಿಯರ್‌ಗಳಿಗೆ ನಿಮ್ಮ ಕಾಲಿಗೆ ಬೀಳುತ್ತೇನೆ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದಿದ್ದರು.

ಇನ್ನು ಈ ವರ್ಷದ ಜೂನ್‌ನಲ್ಲಿ ನಿತೀಶ್ ಕುಮಾರ್ ಅವರು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಲು ಪ್ರಯತ್ನಿಸಿದ್ದರು. ಅಷ್ಟೆ ಅಲ್ಲದೆ, ಏಪ್ರಿಲ್‌ ವೇಳೆ ನವಾಡದಲ್ಲಿ ನಡೆದ ಲೋಕಸಭಾ ಚುನಾವಣಾ ರ್ಯಾಲಿಯಲ್ಲಿ ಕೂಡಾ ಪ್ರಧಾನಿ ಮೋದಿಯವರ ಕಾಲನ್ನು ಮುಟ್ಟಿ ನಮಸ್ಕರಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು