LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ರಮಾಬಾಯಿ ಅಂಬೇಡ್ಕರ್‍ರವರ 127ನೇ ಜಯಂತೋತ್ಸವ

ಹನೂರು: ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಭೀಮ್ ಸೇನಾ ಕರ್ನಾಟಕ ರಾಜ್ಯ ಸರ್ಕಾರಿನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ರಮಾಬಾಯಿ ಅಂಬೇಡ್ಕರ್ ರವರ 127 ನೇ ಜಯಂತೋತ್ಸವ ಕಾರ್ಯ ಕ್ರಮವನ್ನು ಆಯೋಜಿಸಲಾಯಿತು.ಕಾರ್ಯಕ್ರಮವನ್ನು ವೇದಿಕೆಯಲ್ಲಿರುವ ಗಣ್ಯರು ರಮಾಬಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಚಾಲನೆ ನೀಡಿದರು.

ಅಂಬೇಡ್ಕರ್ ವಿಚಾರವಾದಿ ಕೇಶವಮೂರ್ತಿ ಮಾತನಾಡಿ ಡಾ ಬಿ ಆರ್ ಅಂಬೇಡ್ಕರ್ ಮತ್ತು ರಮಾಬಾಯಿ ದಂಪತಿಗಳು ಕೂಡ ಜ್ಯೋತಿ ಬಾ ಫುಲೆ ಮತ್ತು ಸಾವಿತ್ರಿ ಬಾ ಫುಲೆ ರವರಷ್ಟೇ ಆದರ್ಶ ದಂಪತಿಗಳು. ರಮಾಬಾಯಿ ಭೀಮರಾವ್ ಅಂಬೇಡ್ಕರ್ 7 ಫೆಬ್ರವರಿ 1898 ರಲ್ಲಿ ಜನಿಸಿದರು.ರಮಾಬಾಯಿ ಭಿಕು ಧೋತ್ರೆ (ವಲಂಗ್ಕರ್) ಮತ್ತು ರುಕ್ಮಿಣಿ ದಂಪತಿಗಳ ಬಡ ಕುಟುಂಬದಲ್ಲಿ ಜನಿಸಿದರು.

ರಮಾಬಾಯಿ ರವರು 1906 ಏಪ್ರಿಲ್ 4 ರಂದು ಮುಂಬೈನ ಬೈಕುಲ್ಲಾದ ತರಕಾರಿಮಾರುಕಟ್ಟೆಯಲ್ಲಿ ನಡೆದ ಅತ್ಯಂತ ಸರಳ ಸಮಾರಂಭದಲ್ಲಿ ಅಂಬೇಡ್ಕರ್ ಅವರನ್ನು ವಿವಾಹವಾದರು. ಆ ಸಮಯದಲ್ಲಿ, ಅಂಬೇಡ್ಕರ್ ಅವರಿಗೆ 15 ವರ್ಷ ಮತ್ತು ರಮಾಬಾಯಿ ಅವರಿಗೆ ಒಂಬತ್ತು ವರ್ಷವಾಗಿತ್ತು.ಡಾ ಬಿ ಆರ್ ಅಂಬೇಡ್ಕರ್ ರವರ ಸಾಧನೆ ಹಿಂದೆ ಮಾತೆ ರಮಾಬಾಯಿರವರ ಸಂಪೂರ್ಣ ಶ್ರಮವಿದೆ ಅಂದರೆ ತಪ್ಪಾಗಲಾರದು. ಜೀವನದಲ್ಲಿ ಎಲ್ಲವನ್ನೂ ತ್ಯಾಗಮಾಡಿ ಸಾಧನೆ ಮಾಡಿದೆ ಮಹಿಳೆ ಅಂದರೆ ರಮಾಬಾಯಿರವರು ಅದಕ್ಕೆ ಇವರನ್ನು ಪ್ರಪಂಚದ ಆದರ್ಶ ಮಹಿಳೆ ಎಂದು ಕರೆಯಲಾಗುತ್ತದೆ.

ಈ ಸಂದರ್ಭದಲ್ಲಿ ಸಿದ್ದರಾಜು, ಮಹೇಶ್, ಪಪಂ ಸದಸ್ಯೆ ಮಂಜುಳ ಸತೀಶ್, ಹೋರಾಟಗಾರ್ತಿ ರುಕ್ಮೀಣಿ, ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ್, ಪ್ರಧಾನಕಾರ್ಯದರ್ಶಿ ಎಸ್ ನಂಜುಂಡಯ್ಯ, ಖಜಾಂಚಿ ಶಿವಕುಮಾರ್, ಸಾವಿತ್ರಿ ಬಾ ಪುಲೆ ಸಂಘದ ಅಧ್ಯಕ್ಷೆ ಸಂಘದ ಸಾವಿತ್ರಿ, ಉಪಾಧ್ಯಕ್ಷೆ ಶಿವಮ್ಮ, ಉಪನ್ಯಾಸಕ ಮಹೇಂದರ್, ಹಾಗೂ ಸಾರ್ವಜನಿಕರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು