LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕಿ: ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಆದೇಶ

ಬೆಂಗಳೂರು: ಬೊಮ್ಮನಹಳ್ಳಿ ವಲಯದ ಅಪೂರ್ಣ ಕಾಮಗಾರಿಗಳ ಕುರಿತು ವರದಿ ಸಿದ್ಧಪಡಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೊಮ್ಮನಹಳ್ಳಿ ಸೇರಿದಂತೆ ಐಟಿ ಕಾರಿಡಾರ್‌ನ ರಸ್ತೆಗಳ ದಯನೀಯ ಸ್ಥಿತಿ ಮತ್ತು ಜಲಾವೃತ ಸ್ಥಿತಿಗತಿಯನ್ನು ಎತ್ತಿ ತೋರಿಸುತ್ತದೆ ಎಂದು ಬಯೋಕಾನ್ ಸಂಸ್ಥಾಪಕ-ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಆಯುಕ್ತರು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಬೊಮ್ಮನಹಳ್ಳಿಯಲ್ಲಿ ಮಂಗಳವಾರ ನಡೆದ ‘ವಲಯದತ್ತ ಆಯುಕ್ತರ ನಡೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಎಲ್ಲ ಅಪೂರ್ಣ ಕಾಮಗಾರಿಗಳನ್ನು ಪಟ್ಟಿ ಮಾಡಿ ವರದಿ ತಯಾರಿಸಿ ಎಂದು ಆಯುಕ್ತರು ಅಧಿಕಾರಿಗಳಿಗೆ ತಿಳಿಸಿದರು.

ವಲಯದ ಎಲ್ಲ ಪ್ರಮುಖ ರಸ್ತೆಗಳನ್ನು ಪರಿಶೀಲಿಸಿ, ಹಾನಿಗೊಳಗಾದ ರಸ್ತೆಗಳಿಗೆ ಡಾಂಬರೀಕರಣ, ಗುಂಡಿಗಳನ್ನು ತಕ್ಷಣವೇ ಮುಚ್ಚುವಂತೆ ಹೇಳಿದರು.

ನಗರದ ಸುತ್ತಮುತ್ತ ಇರುವ ಕೆರೆಗಳಿಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಕಸ ವಿಲೇವಾರಿ ಬಗ್ಗೆ ನಿಗಾ ವಹಿಸಲು ಮಾರ್ಷಲ್‌ಗಳನ್ನು ನಿಯೋಜಿಸುವಂತೆ ವಲಯ ಅಧಿಕಾರಿಗಳಿಗೆ ಸೂಚಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು