LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಸ್ತೆ ಗುಂಡಿ ಮುಚ್ಚುವಂತೆ ಬಿಬಿಎಂಪಿ ವಿರುದ್ಧ ಪ್ರತಿಭಟನೆ: ಕೇಕ್ ಕತ್ತರಿಸಿ ವಾರ್ಷಿಕೋತ್ಸವ ಆಚರಿಸಿದ ವರ್ತೂರು ನಿವಾಸಿಗಳು

ಬೆಂಗಳೂರು: ನಗರದ ಐಟಿ ಕಾರಿಡಾರ್‌ನ ಅವಿಭಾಜ್ಯ ಅಂಗವಾದ ವರ್ತೂರಿನ ನೂರಾರು ನಿವಾಸಿಗಳು ಶನಿವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಮ್ಮ ಪ್ರದೇಶಕ್ಕೆ ರಸ್ತೆ ದುರಸ್ತಿ ಮತ್ತು ಇತರ ಸೌಕರ್ಯಗಳನ್ನು ಒದಗಿಸದಿರುವುದನ್ನು ವಿರೋಧಿಸಿ ನಡೆಸಿದ ತಮ್ಮ ಪ್ರತಿಭಟನೆಯ ಮೊದಲ ವಾರ್ಷಿಕೋತ್ಸವವನ್ನು 'ಆಚರಿಸಿದರು'. ಈ ಸಂದರ್ಭದಲ್ಲಿ ಕೇಕ್ ಕತ್ತರಿಸಿದರು.

ಕಳೆದ ವರ್ಷ ಇದೇ ದಿನ ಉತ್ತಮ ರಸ್ತೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿ ವರ್ತೂರಿನಲ್ಲಿ ಗುಂಡಿಗಳನ್ನು ತುಂಬಿಸುವಂತೆ ಪಾಲಿಕೆಗೆ ಮನವಿ ಸಲ್ಲಿಸಿದ್ದರು. ಆದರೆ ಅವರ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಂಡಿಲ್ಲ. ಇಲ್ಲಿನ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಪಾಲಿಕೆಯ ಅಸಮರ್ಥತೆ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು. ಬಿಬಿಎಂಪಿ ಮುಖ್ಯ ಆಯುಕ್ತರು, ಮಹದೇವಪುರ ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಎಂಜಿನಿಯರ್ ಮತ್ತು ವಾರ್ಡ್ ಅಧಿಕಾರಿಗಳಿಗೆ ಬಲವಾದ ಸಂದೇಶವನ್ನು ಕಳುಹಿಸಲು ಕೇಕ್ ಕತ್ತರಿಸುವ ಸಮಾರಂಭವನ್ನು ಆಯೋಜಿಸಿದ್ದರು.

ಇತ್ತೀಚೆಗೆ ಸುರಿದ ಮಳೆಗೆ ವರ್ತೂರು ಮಾತ್ರವಲ್ಲದೆ ಮಹದೇವಪುರ ವಲಯದ ಇತರ ಭಾಗಗಳಲ್ಲಿಯೂ ರಸ್ತೆಗಳು ಗುಂಡಿಗಳಿಂದ ತುಂಬಿವೆ. ನಾವು ಮನವಿ ಮಾಡಿದರೂ ಪಾಲಿಕೆ ಅಧಿಕಾರಿಗಳು ಗುಂಡಿಗಳನ್ನು ತುಂಬಿಸಲು ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು ವರ್ತೂರಿನ ಜಗದೀಶ್ ರೆಡ್ಡಿ ಹೇಳಿದರು. ಯೋಜನಾ ವಿಭಾಗದ ಬಿಬಿಎಂಪಿ ಅಧಿಕಾರಿಯೊಬ್ಬರು ಮಾತನಾಡಿ, ಮಹದೇವಪುರ ವಲಯದ ಹಲವು ರಸ್ತೆಗಳನ್ನು ವೈಟ್‌ ಟಾಪಿಂಗ್‌ಗೆ ಗುರುತಿಸಲಾಗಿದ್ದು, ಮಾರ್ಚ್‌ ಅಂತ್ಯದೊಳಗೆ ಗುಂಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಪಾಲಿಕೆಯು ಉಕ್ಕಿನ ಕೈಗಾರಿಕೆಗಳಿಂದ (ಕಬ್ಬಿಣ ಮತ್ತು ಉಕ್ಕಿನ ಸ್ಲ್ಯಾಗ್) ಕೈಗಾರಿಕಾ ತ್ಯಾಜ್ಯವನ್ನು ಬಳಸಿ ಅಭಿವೃದ್ಧಿಪಡಿಸಿದ ‘ಇಕೋಫಿಕ್ಸ್ ಮಿಶ್ರಣ’ದಿಂದ ಅವೆನ್ಯೂ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಪ್ರಾರಂಭಿಸಿದೆ. ಗುಂಡಿಗಳನ್ನು ತುಂಬಲು, ನೀರನ್ನು ಹರಿಸುವುದು ಮತ್ತು ಟ್ಯಾಕ್ ಕೋಟ್ ಹಾಕಲು ಅವುಗಳನ್ನು ಸ್ವಚ್ಛಗೊಳಿಸುವುದು ಅವಶ್ಯಕ. ಆದರೆ ಗುಂಡಿಗಳನ್ನು ಸ್ವಚ್ಛಗೊಳಿಸದೆಯೇ ‘ಇಕೋಫಿಕ್ಸ್ ಮಿಶ್ರಣ’ದಿಂದ ತುಂಬಿಸಬಹುದು. ಟ್ಯಾಕ್ ಕೋಟ್ ಅಗತ್ಯವಿಲ್ಲ ಎಂದು ಪಾಲಿಕೆ ಎಂಜಿನಿಯರ್‌ಗಳು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು