LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಾಗಿಣಿ ದ್ವಿವೇದಿ ಅವರಿಂದ ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟನೆ

ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿಯನ್ನು ನಟಿ ರಾಗಿಣಿ ದ್ವಿವೇದಿ ಇತ್ತೀಚಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಜ್, ಗೌರವಾಧ್ಯಕ್ಷರಾದ ರವಿಶಂಕರ್, ಸಂಘದ ಪದಾಧಿಕಾರಿಗಳು ಹಾಗೂ ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟದ ವಿವಿಧ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಲಾವಿದರು ಅಂದವಾಗಿ ಕಾಣಲು ಅವರು ಹಾಕುವ ಉಡುಗೆಯೇ ಕಾರಣ. ಅಂತಹ ವಸ್ತ್ರವನ್ನು ನಮಗೆ ಸರಿ ಹೊಂದುವ ಹಾಗೆ ಸಿದ್ದಪಡಿಸಿಕೊಡುವಲ್ಲಿ ವಸ್ತ್ರಾಲಂಕಾರ ಕಲಾವಿದರ ಪಾತ್ರ ದೊಡ್ಡದು. ಇಂದು ಅವರ ಸಂಘದ ಹೊಸ ಕಛೇರಿ ಉದ್ಘಾಟನೆ ಹಾಗೂ ಪೂಜಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಹಳ ಸಂತೋಷವಾಗಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ರಾಗಿಣಿ ದ್ವಿವೇದಿ ಹಾರೈಸಿದರು.

ಮೂವತ್ತೈದು ವರ್ಷಗಳ ಇತಿಹಾಸವಿರುವ ನಮ್ಮ ಸಂಘದ ಹೊಸ ಕಛೇರಿ ಉದ್ಘಾಟನೆ ಹಾಗೂ ಆಯುಧ ಪೂಜಾ ಸಮಾರಂಭಕ್ಕೆ ಆಗಮಿಸಿರುವ ರಾಗಿಣಿ ಅವರಿಗೆ ಹಾಗೂ ಎಲ್ಲಾ ಗಣ್ಯರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ ಸಂಘದಲ್ಲಿ 250 ಕ್ಕೂ ಅಧಿಕ ಜನ ಸದಸ್ಯರಿದ್ದಾರೆ. ಎಲ್ಲರ ಸಹಕಾರದಿಂದ ನಮ್ಮ ಸಂಘದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ.

ಜನವರಿಯಲ್ಲಿ ಸಂಘದ ಮೂವತ್ತೈದನೇ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಿದ್ದೇವೆ ಎಂದು ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ಶಿವರಾಜ್ ತಿಳಿಸಿದರು. ಒಕ್ಕೂಟದ ಖಜಾಂಚಿ ಸೋಮು, ಹಿರಿಯ ನಿರ್ಮಾಣ ನಿರ್ವಾಹಕರಾದ ಪ್ರಕಾಶ್ ಮುಂತಾದವರು ಈ ಸಂದರ್ಭದಲ್ಲಿ ಮಾತನಾಡಿ ಶುಭ ಹಾರೈಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು