LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ- ದಿನೇಶ್ ಗುಂಡೂರಾವ್

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಾಣಂತಿಯರ ಸಾವಿಗೆ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಬಳಕೆ ಕಾರಣವೇ ಎಂಬುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಆದರೂ ಅನುಮಾನದಿಂದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.

ರಿಂಗಲ್ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ನ್ನು ಈ ಹಿಂದಿನಿಂದಲೂ ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್ ಗಳಲ್ಲಿ ಐವಿ ದ್ರಾವಣ ಪೂರೈಕೆಯಾಗಿತ್ತು. ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್ ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ ಸಂಪೂರ್ಣವಾಗಿ ಎಲ್ಲ 192 ಬ್ಯಾಚ್ ಗಳ ದ್ರಾವಣವನ್ನು ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು. ಬಳಿಕ ಸೆಂಟ್ರಲ್ ಡ್ರಗ್ ಲ್ಯಾಬೊರೇಟರಿಯಲ್ಲಿ ಪರೀಕ್ಷೆ ನಡೆಸಿದಾಗ ದ್ರಾವಣ ಬಳಸಬಹುದು ಎಂಬ ವರದಿ ಬಂದಿತ್ತು ಎಂದು ತಿಳಿಸಿದರು.

ಕೇಂದ್ರೀಯ ಔಷಧ ಪ್ರಯೋಗಾಲಯದ ವರದಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಪರೀಕ್ಷೆ ನಡೆಸಿ ಗುಣಮಟ್ಟದ ಕೆಲವು ಬ್ಯಾಚ್ ಗಳ ದ್ರಾವಣ ಬಳಸಲು ಅವಕಾಶ ಮಾಡಿಕೊಡಲಾಗಿತ್ತು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಅನುಮಾನಗಳು ವ್ಯಕ್ತವಾಗಿವೆ ಎಂದರು.

ಬಳ್ಳಾರಿ ಆಸ್ಪತ್ರೆಗೆ ಪೂರೈಕೆಯಾದ ಬ್ಯಾಚ್ ಗಳನ್ನು ಅನರೋಬಿಕ್ ಟೆಸ್ಟ್ ಗೆ ಕಳುಹಿಸಿದ್ದೇವೆ. ಬಾಣಂತಿಯರ ಸಾವಿಗೆ ಐವಿ ದ್ರಾವಣ ಕಾರಣವೇ ಎಂಬುದಕ್ಕೆ ಪರೀಕ್ಷೆಯಲ್ಲಿ ಸ್ಪಷ್ಟತೆ ಸಿಗಲಿದೆ. ವಾರದಲ್ಲಿ ಈ ವರದಿ ಬರಲಿದೆ. ತದನಂತರ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ಮುಂಜಾಗ್ರತೆ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ವೇಟ್ ಬಳಕೆಯನ್ನು ರಾಜ್ಯಾದ್ಯಂತ ಸ್ಥಗಿತಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು