LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಬಂಗಾರಪೇಟೆ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ರಥಯಾತ್ರೆಗೆ ತಾಲ್ಲೂಕಿನ ಗಡಿ ಭಾಗದಲ್ಲಿ ಹಂಚಾಳದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಶಾಲಾ ಮಕ್ಕಳು ಹಾಗೂ ಶಾಸಕ ಎಸ್.ಎನ್. ನಾರಾಯಣಸ್ವಾಮಿ ರವರು ತಾಯಿ ಭುವನೇಶ್ವರಿ ದೇವಿಗೆ ಪುಷ್ಪ ನಮನವನ್ನು ಸಲ್ಲಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು.

ನಂತರ ಪಟ್ಟಣದ ಅಂಬೇಡ್ಕರ್ ಪುತ್ತಳಿ ಬಳಿ ಕನ್ನಡ ರಥಯಾತ್ರೆ ಆಗಮಿಸಿತು. ಪುರಸಭೆ ವತಿಯಿಂದ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿ ಪುಷ್ಪ ನಮನವನ್ನು ನೆರವೇರಿಸಿದರು. ಮೆರವಣಿಗೆಯಲ್ಲಿ ವೀರಗಾಸೆ ತಂಡಗಳ ಆಕರ್ಷಕ ನೃತ್ಯ ಮೆರುಗು ನೀಡಿತ್ತು.ಈ ವೇಳೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾತನಾಡಿ, ಒಂದು ತಿಂಗಳ ಹಿಂದೆ ಪ್ರಾರಂಭವಾಗಿರುವ ಕನ್ನಡ ತಾಯಿಯ ಭುವನೇಶ್ವರಿ ದೇವಿ ರಥಯಾತ್ರೆ ಈ ದಿನ ಬಂಗಾರಪೇಟೆಗೆ ಆಗಮಿಸಿದೆ. ನಾವೆಲ್ಲರೂ ಸಹ ಅದ್ದೂರಿಯಾಗಿ ತಾಯಿ ಭುವನೇಶ್ವರಿಯ ರಥಯಾತ್ರೆಯನ್ನು ಗಡಿನಾಡು ಭಾಗಕ್ಕೆ ಸ್ವಾಗತಿಸಿದ್ದೇವೆ. ಬಹಳ ವರ್ಷಗಳ ನಂತರ ನವಂಬರ್ ನಲ್ಲಿ ಕನ್ನಡ ರಥಯಾತ್ರೆ ಬಂದಿರುವುದು ಬಹಳ ಸಂತೋಷವಾಗಿದೆ.

ಈಗಾಗಲೇ ನಾವು ಕನ್ನಡ ಭವನವನ್ನು ಸಹ ಪಟ್ಟಣದಲ್ಲಿ ನಿರ್ಮಿಸಬೇಕು ಎಂದು ಅಂದುಕೊಂಡಿದ್ದೇವೆ. ನಿರ್ಮಾಣದ ನಂತರ ಆ ತಾಯಿ ಭುವನೇಶ್ವರಿಯನ್ನು ಪ್ರತಿದಿನ ಆರಾಧಿಸಬೇಕು ಎಂದರು. ಈ ರಥಯಾತ್ರೆಯನ್ನು ಸಂಜೆವರೆಗೂ ಸಹ ಪಟ್ಟಣ ಹಾಗೂ ತಾಲ್ಲೂಕಿನ ಪಂಚಾಯತಿ ವ್ಯಾಪ್ತಿಯಲ್ಲಿ ಮೆರವಣಿಗೆ ಮಾಡಿ ನಂತರ ಕೆಜಿಎಫ್ ತಾಲ್ಲೂಕಿಗೆ ಕಳುಹಿಸಿಕೊಡುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷ ಗೋವಿಂದ, ಉಪಾಧ್ಯಕ್ಷ ಚಂದ್ರವೇಣಿ ಮಂಜುನಾಥ್, ಪುರಸಭೆ ಸದಸ್ಯ ಎಸ್. ವೆಂಕಟೇಶ್,ತಹಶೀಲ್ದಾರ್ ವೆಂಕಟೇಶ್,ಇ.ಓ. ರವಿಕುಮಾರ್, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ,ಬಿಇಓ ಗುರುಮೂರ್ತಿ, ಸಿ ಡಿ ಪಿ ಓ ಮುನಿರಾಜು, ಕೃಷಿ ಇಲಾಖೆಯ ಪ್ರತಿಭಾ,ಫೀಲ್ಡ್ ಮಾರ್ಷಲ್ ಕಾರಿಯಪ್ಪ ಶಾಲೆಯ ಅಧ್ಯಕ್ಷರಾದ ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಗೋಪಾಲಗೌಡ, ತಾಲ್ಲೂಕು ಅಧ್ಯಕ್ಷ ಸಂಜೀವಪ್ಪ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರವಿ,ಇನ್ಸ್ಪೆಕ್ಟರ್ ದಯಾನಂದ್ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು. ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು