LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯ ಬಿಜೆಪಿಗೆ ಸಮರ್ಥ ನಾಯಕತ್ವ ಇಲ್ಲ ವರಿಷ್ಠರಿಗೆ ಡಿವಿಎಸ್ ಪತ್ರ

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಕ್ಷೇತ್ರದ ಚುನಾವಣೆ ಹಾಗೂ ರಾಜ್ಯದ ಬಿಜೆಪಿಯಲ್ಲಿನ ಇಂದಿನ ಸ್ಥಿತಿಗತಿಗಳ ವಿಚಾರದ ಬಗ್ಗೆ ಬಿಜೆಪಿ ಹೈಕಮಾಂಡ್ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ಸುದೀರ್ಘ ಪತ್ರ ಬರೆದಿದ್ದಾರೆ.
ಪತ್ರದ ಪ್ರಮುಖ ಅಂಶಗಳು ಇಂತಿವೆ.

ರಾಜ್ಯದಲ್ಲಿ ಇಂದು ಬಿಜೆಪಿ ಗಟ್ಟಿಗೊಳಿಸಲು ಸಮರ್ಪಕವಾದ ನಾಯಕತ್ವ ಇಲ್ಲ. ನಾವು ಕಳೆದ ವಿಧಾನಸಭಾ ಹಾಗೂ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿಸಿದ ಮಟ್ಟ ತಲುಪಿಲ್ಲ. ಕಳೆದ ಬಾರಿ ನಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ 40% ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಲಾಗಿತ್ತು. ಇದರ ಬಗ್ಗೆ ಯಾವುದೇ ಸಮಜಾಯಿಷಿ ನೀಡಿಲ್ಲ. ಇನ್ನು ಇದರ ಬಗ್ಗೆ ಯಾವುದೇ ನಾಯಕರು ಸರಿಯಾಗಿ ಪಕ್ಷದಲ್ಲಿ ಸಮರ್ಥನೆ ಮಾಡಿಕೊಳ್ಳದೇ ನಾವು ಎಡವಿದ್ದೇವೆ.

ಹಳೆಯ ಮೈಸೂರು ಭಾಗದಲ್ಲಿ ಸಂಘಟನೆ ಮಾಡಲು ಹೋಗಿ, ಇದ್ದ ಬೇಸ್ ಕಳೆದುಕೊಂಡಿದ್ದೇವೆ. ಇತ್ತ ಸಂಘಟನೆ ವಿಚಾರದಲ್ಲಿ ನಿಗಾ ಸಮರ್ಪಕವಾಗಿ ಎದುರಿಸುತ್ತಿಲ್ಲ. ಇದೆಲ್ಲಾ ಆದ ಬಳಿಕ ಜೆಡಿಎಸ್ ಜೊತೆಗೆ ಮೈತ್ರಿ ಮೇಲೆ ನಾವು ಹೆಚ್ಚು ಅವಲಂಬಿತವಾಗಿದ್ದೇವೆ. ಒಕ್ಕಲಿಗ ಸಮುದಾಯದ ನಾಯಕರು ಸೇರಿದಂತೆ ಯಾವ ಸಮುದಾಯದ ನಾಯಕರು ಕೂಡ ಪಕ್ಷದ ಹಿತಾಸಕ್ತಿಗೆ ದುಡಿಯುತ್ತಿಲ್ಲ. ಇತ್ತ ಚುನಾವಣೆ ಸಂದರ್ಭದಲ್ಲಿ ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತೆ ಮಾತ್ರ ಕೆಲಸ ಮಾಡಿದ್ರೆ, ನಾವು ಗುರಿ ಮುಟ್ಟುವುದು ಕಷ್ಟವಾಗಲಿದೆ ಎಂದು ಹೀಗೆ ಸಾಲು ಸಾಲು ವಿಚಾರಗಳನ್ನು ಪ್ರಸ್ತಾಪಿಸಿ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು