LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯ ಬಿಜೆಪಿಯಲ್ಲಿ ಮುಂದುವರಿದ ಗೊಂದಲ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಬದಲಾವಣೆಗೆ ಕೆಲ ನಾಯಕರ ಪಟ್ಟು ಹಿಡಿದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಅವರನ್ನೇ ರಾಜ್ಯಾಧ್ಯಕ್ಷರಾಗಿ ಮುಂದುವರೆಸಲು ಹೈಕಮಾಂಡ್ ನಾಯಕರ ನಿರ್ಧಾರ ಮಾಡಿದ್ದಾರೆ. ಆದರೆ, ಅಧಿಕೃತ ಘೋಷಣೆ ಇನ್ನು ಕೆಲ ದಿನಗಳ ಕಾಲ ಮುಂದೂಡಿಕೆ ಸಾಧ್ಯತೆಯಿದೆ ಎನ್ನಲಾಗಿದೆ.

ಲಭ್ಯವಿರುವ ಬಿಜೆಪಿಯ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷ ಎಂದು ಘೋಷಿಸಲು ಕೆಲ ತಾಂತ್ರಿಕ ಅಡಚಣೆಗಳಿವೆ ಎಂದು ಹೇಳಲಾಗುತ್ತಿದೆ.
ದೇಶದಲ್ಲಿ ಕೆಲ ರಾಜ್ಯಗಳಿಗೆ ಇನ್ನು ರಾಜ್ಯಾಧ್ಯಕ್ಷರ ನೇಮಕ ಆಗಿಲ್ಲ.,ಇನ್ನು ಈಗಾಗಲೇ ಕೆಲ ರಾಜ್ಯಗಳಲ್ಲಿನ ಸಂಘಟನಾತ್ಮಕ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕವನ್ನೇ ಪಕ್ಷ ಘೋಷಿಸಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಸಂಘಟನೆ ನೀಡಬೇಕಾದ ಒತ್ತು ಕಡಿಮೆಯಾಗಿದೆ.

ಇನ್ನು ದೆಹಲಿ ರಾಜ್ಯದ ಮುಖ್ಯಮಂತ್ರಿಗಳ ಆಯ್ಕೆ ಆಗಬೇಕಿದೆ. ಇದರ ಜೊತೆಗೆ ರಾಜ್ಯದಲ್ಲೂ ಇರುವ 39 ಸಂಘಟನಾತ್ಮಕ ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ಆಯ್ಕೆ ಆಗಿದ್ದು, ಅದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರ ಆಯ್ಕೆ ತಡೆ ಹಿಡಿಯಲಾಗಿದೆ. ಇನ್ನು ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಾವುದೇ ರಾಜ್ಯದಲ್ಲಿರುವ ಸಂಘಟನಾತ್ಮಕ ಜಿಲ್ಲೆಗಳ ಪೈಕಿ ಶೇ.50% ರಷ್ಟು ಆದ್ರೂ ರಾಜ್ಯಾಧ್ಯಕ್ಷರ ನೇಮಕ ಆಗಬಹುದು.

ಇಲ್ಲಿ ವಿಜಯೇಂದ್ರರ ವಿರೋಧಿ ಬಣ ಕೂಡ ಫುಲ್ ಸಕ್ರಿಯವಾಗಿದ್ದು, ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದೆಲ್ಲದರ ಜೊತೆಗೆ ರಾಷ್ಟ್ರೀಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ತಲೆದೂರಿದ್ದು ಅದನ್ನೆಲ್ಲಾ ಸರಿಪಡಿಸಬೇಕಾದ ಅನಿವಾರ್ಯತೆ ಹೈಕಮಾಂಡ್ ನಾಯಕರ ಮೇಲಿದೆ.ಹೀಗೆ ಸಾಲು ಸಾಲು ಕಾರಣಗಳು ಮುಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಕ್ಷರ ಆಯ್ಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ.ಈ ವಾರದಲ್ಲಿ ಎಲ್ಲವೂ ಬಗೆಹರಿಯಲಿದೆ ಎಂದುಕೊಂಡಿದ್ದು, ಈ ತಿಂಗಳಾಂತ್ಯದವರೆಗೂ ಮುಂದೂಡಿಕೆಯಾದರೂ ಅಚ್ಚರಿಯಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು