LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣೆ: 2ನೇ ಅವಧಿಗೆ ಸಿಎಸ್ ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ 2ನೇ ಅವಧಿಗೆ ಸಿ.ಎಸ್ ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್​.ಷಡಾಕ್ಷರಿಗೆ ಅವರಿಗೆ 507 ಮತಗಳು ಬಂದರೆ, ಬಿ.ಪಿ.ಕೃಷ್ಣೇಗೌಡಗೆ 442 ಮತಗಳು ಲಭಿಸಿದ್ದವು.

ಖಚಾಂಜಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ನಾಗರಾಜ ಆರ್​.ಜುಮ್ಮನ್ನವರ (ಷಡಾಕ್ಷರಿ ಬಣ), ವಿ.ವಿ.ಶಿವರುದ್ರಯ್ಯ (ಬಿ.ಪಿ.ಕೃಷ್ಣೇಗೌಡ ಬಣ) ವಿರುದ್ಧ ಕೇವಲ 18 ಮತಗಳ ಅಂತರದಿಂದ ಸೋಲು ಅನುಭವಿಸಿದರು. ವಿ.ವಿ.ಶಿವರುದ್ರಯ್ಯ 485 ಮತ ಪಡೆದರೆ, ನಾಗರಾಜ ಆರ್​.ಜುಮ್ಮನ್ನವರಗೆ 467 ಮತಗಳು ಬಂದಿವೆ.

ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್​ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್​ ಸದಸ್ಯರು, ಜಿಲ್ಲಾ ಕಾರ್ಯದರ್ಶಿ, ತಾಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್​ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿ ಒಟ್ಟು 949 ಮತದಾರರು ಮತ ಚಲಾಯಿಸಿದ್ದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST