LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಾಜ್ಯ ಸರ್ಕಾರಿ ನೌಕರರ ಸಂಘ ಚುನಾವಣೆ: 2ನೇ ಅವಧಿಗೆ ಸಿಎಸ್ ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ 2ನೇ ಅವಧಿಗೆ ಸಿ.ಎಸ್ ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಶುಕ್ರವಾರ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್​.ಷಡಾಕ್ಷರಿಗೆ ಅವರಿಗೆ 507 ಮತಗಳು ಬಂದರೆ, ಬಿ.ಪಿ.ಕೃಷ್ಣೇಗೌಡಗೆ 442 ಮತಗಳು ಲಭಿಸಿದ್ದವು.

ಖಚಾಂಜಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ನಾಗರಾಜ ಆರ್​.ಜುಮ್ಮನ್ನವರ (ಷಡಾಕ್ಷರಿ ಬಣ), ವಿ.ವಿ.ಶಿವರುದ್ರಯ್ಯ (ಬಿ.ಪಿ.ಕೃಷ್ಣೇಗೌಡ ಬಣ) ವಿರುದ್ಧ ಕೇವಲ 18 ಮತಗಳ ಅಂತರದಿಂದ ಸೋಲು ಅನುಭವಿಸಿದರು. ವಿ.ವಿ.ಶಿವರುದ್ರಯ್ಯ 485 ಮತ ಪಡೆದರೆ, ನಾಗರಾಜ ಆರ್​.ಜುಮ್ಮನ್ನವರಗೆ 467 ಮತಗಳು ಬಂದಿವೆ.

ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್​ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್​ ಸದಸ್ಯರು, ಜಿಲ್ಲಾ ಕಾರ್ಯದರ್ಶಿ, ತಾಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್​ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿ ಒಟ್ಟು 949 ಮತದಾರರು ಮತ ಚಲಾಯಿಸಿದ್ದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು