LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರಾಮನಗರ ಜಿಲ್ಲೆಯಲ್ಲಿ 45 ನಿಮಿಷದ ಅಂತರದಲ್ಲಿ 2 ಸಲ ದರೋಡೆಗೊಳಗಾದ ವೃದ್ಧೆ

ರಾಮನಗರ: ದುರಾದೃಷ್ಟ ಎಂಬಂತೆ ರಾಮನಗರ ಜಿಲ್ಲೆಯಲ್ಲಿ 78 ವರ್ಷದ ಮಹಿಳೆಯೊಬ್ಬರನ್ನು 45 ನಿಮಿಷಗಳ ಅಂತರದಲ್ಲಿ ಎರಡು ಬಾರಿ ದರೋಡೆಗೊಳಗಾಗಿದ್ದಾರೆ.

ಪುಟ್ಟಮ್ಮ ಎಂಬುವರು 1.5 ಲಕ್ಷ ರು. ಮೌಲ್ಯದ ತಮ್ಮ 30 ಗ್ರಾಂ ಚಿನ್ನದ ಸರ ಕಳೆದುಕೊಂಡಿದ್ದಾರೆ. ಪುಟ್ಟಮ್ಮ ಸಾತನೂರು ರಸ್ತೆಯ ಕನಕನಗರ ನಿವಾಸಿ. ಶನಿವಾರ ಸಂಜೆ 4.30ರಿಂದ 5.15ರ ನಡುವೆ ಅಪ್ಪಗೆರೆಯ ದೇವಸ್ಥಾನವೊಂದಕ್ಕೆ ಒಂಟಿಯಾಗಿ ತೆರಳುತ್ತಿದ್ದ ವೇಳೆ ಆಕೆಯ ಮೇಲೆ ದಾಳಿ ನಡೆದಿದೆ.

ಸ್ಕೂಟರ್‌ನಲ್ಲಿ ಬಂದ ದುಷ್ಕರ್ಮಿಯೊಬ್ಬ ಆಕೆಯನ್ನು ಅಡ್ಡಗಟ್ಟಿ ಆಕೆಯ ಸರವನ್ನು ಕಸಿದುಕೊಳ್ಳಲು ಯತ್ನಿಸಿದ್ದಾನೆ. ವೇಳೆ ಸಂತ್ರಸ್ತೆ ಇನ್ನರ್ಧವನ್ನು ಹಿಡಿದುಕೊಂಡಿದ್ದಾರೆ. ಆರೋಪಿ ಅರ್ಧದಷ್ಟು ಸರದೊಂದಿಗೆ ಪರಾರಿಯಾಗಿದ್ದಾನೆ. ಅಷ್ಟರಲ್ಲಾಗಲೇ ಬೈಕ್‌ನಲ್ಲಿ ಬಂದ ಮತ್ತೋರ್ವ ವ್ಯಕ್ತಿ ಪುಟ್ಟಮ್ಮನನ್ನು ತನ್ನ ವಾಹನದಲ್ಲಿ ಕರೆದುಕೊಂಡು ಹೋಗಿ ದರೋಡೆ ಮಾಡಿದ ದುಷ್ಕರ್ಮಿಯನ್ನು ಹಿಂಬಾಲಿಸಿ ಹಿಡಿಯಲು ಮುಂದಾದರು.

ಆರೋಪಿಗಾಗಿ ಹುಡುಕಾಟ ನಡೆಸಿದಂತೆ ನಟಿಸಿ, ಬೈಕ್‌ನಲ್ಲಿ ಬಂದ ವ್ಯಕ್ತಿ ಪುಟ್ಟಮ್ಮ ಅವರನ್ನು ಆಕೆಯ ಮನೆಗೆ ಸಮೀಪವಿರುವ ಹೌಸಿಂಗ್ ಬೋರ್ಡ್ ಹಿಂಭಾಗದ ಸಿಎಂಸಿ ಟೌನ್‌ನಲ್ಲಿ ಡ್ರಾಪ್ ಮಾಡಿದ್ದಾನೆ. ಆಕೆ ಅವನಿಗೆ ಧನ್ಯವಾದ ಹೇಳುತ್ತಿರುವಾಗ, ಆ ವ್ಯಕ್ತಿ ಸರದ ಉಳಿದ ಅರ್ಧವನ್ನು ಕಿತ್ತುಕೊಂಡಿದ್ದಾನೆ. ಪುಟ್ಟಮ್ಮನ ಚಿನ್ನದ ಬಳೆಗಳು ಮತ್ತು ಕಿವಿಯೋಲೆಗಳನ್ನು ಕೊಡುವಂತೆ ಕೇಳಿದ್ದಾನೆ. ಕೈಯ್ಯಲ್ಲಿ ಸ್ವಲ್ಪ ದ್ರವವಿರುವ ಪ್ಲಾಸ್ಟಿಕ್ ಬಾಟಲಿಯನ್ನು ಹಿಡಿದುಕೊಂಡು ಆಸಿಡ್ ಎರಚುವುದಾಗಿ ಬೆದರಿಕೆ ಹಾಕಿದ್ದಾನೆ. ವೃದ್ಧೆ ಸಹಾಯಕ್ಕಾಗಿ ಕಿರುಚಲು ಆರಂಭಿಸಿದಾಗ ಆರೋಪಿ ಆಕೆಯ ಮುಖಕ್ಕೆ ದ್ರವ ಎರಚಿ ಪರಾರಿಯಾಗಿದ್ದಾರೆ. ಅದೃಷ್ಟವಶಾತ್ ಅದು ಸೀಮೆಎಣ್ಣೆ ಎಂದು ತಿಳಿದುಬಂದಿದೆ. ಆಕೆಯ ಅಳಲು ಕೇಳಿದ ಸ್ಥಳೀಯರು ಆಕೆಯ ಸಹಾಯಕ್ಕೆ ಧಾವಿಸಿ ಆಕೆಯ ಮಗ ಶ್ರೀನಿವಾಸ್‌ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ನನ್ನ ತಾಯಿ ಆಘಾತಕ್ಕೊಳಗಾಗಿದ್ದಾರೆ. ಅದೃಷ್ಟವಶಾತ್ ಆ ದ್ರವ ಸೀಮೆಎಣ್ಣೆಯಾಗಿತ್ತು. ಮೊದಲ ದುಷ್ಕರ್ಮಿ ಸ್ಕೂಟರ್‌ನಲ್ಲಿ ಬಂದಿದ್ದರೆ, ಮತ್ತೊಬ್ಬ ಬೈಕ್‌ನಲ್ಲಿ ಬಂದಿದ್ದಾನೆ. ಇಬ್ಬರೂ ಸಹಚರರಾಗಿರಬೇಕು ಎಂದು ಶ್ರೀನಿವಾಸ್ ಟಿಎನ್‌ಐಇಗೆ ತಿಳಿಸಿದರು. ಇಬ್ಬರು ಅಪರಿಚಿತ ಆರೋಪಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 309(4) ಅಡಿಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು, ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು