LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ರಾಮಾಯಣ ಮಹಾಕಾವ್ಯ ಜೀವನಮೌಲ್ಯ ಪ್ರತಿಬಿಂಬಿಸುವ ಕಾವ್ಯವಾಗಿದೆ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಹೇಳಿಕೆ

ದೊಡ್ಡಬಳ್ಳಾಪುರ: ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಾಣಬಹುದಾಗಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ಕಾವ್ಯ ಓದುವ ಮೂಲಕ ಸಹೃದಯರು ಬದುಕಿನ ಸತ್ಯಗಳನ್ನು ಅರಿಯಬೇಕಾಗಿದೆ. ರಾಮಾಯಣ ಕಾವ್ಯದ ಮೂಲಕ ಸುಖ ದುಃಖಗಳು ಮನುಷ್ಯನ ಬದುಕಿನ ಭಾಗ ಎನ್ನುವ ಸಂದೇಶ ನೀಡಲಾಗಿದೆ ಎಂದರು.

ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಮಾತನಾಡಿ, ಮಹರ್ಷಿ ವಾಲ್ಮೀಕಿ ಗುರುವಾಗಿ, ಕವಿಯಾಗಿ ಭಾರತೀಯರಿಗೆ ಸ್ಫೂರ್ತಿಯಾಗಿದೆ. ವಾಲ್ಮೀಕಿ ರಾಮಾಯಣ ರಾಮನ ಪಯಣದ ಕಥೆಯಾಗಿದೆ. ಸದ್ಗುಣ ಮತ್ತು ದುರ್ಗುಣ ನಡುವಿನ ಸಂಘರ್ಷದಲ್ಲಿ ಸದ್ಗುಣಕ್ಕೆ ಜನಮನ್ನಣೆ ಮತ್ತು ಜಯವಿದೆ ಎಂಬ ಸಂದೇಶ ಕಾವ್ಯದಲ್ಲಿದೆ. ರಾಮಾಯಣ ಕಾವ್ಯದಲ್ಲಿ ಸಾರ್ವಕಾಲಿಕ ಸತ್ಯಗಳ ಅಂಶವಿದೆ. ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲೆ ವಾಲ್ಮೀಕಿ ಮತ್ತು ರಾಯಾಯಣ ಕಾವ್ಯದ ಪ್ರಭಾವ ಇದೆ. ರಾಮಾಯಣ ಬರೀ ರಾಜರ ಕಥೆಗಷ್ಟೇ ಸೀಮಿತವಾಗಿಲ್ಲ. ಧಾರ್ಮಿಕ ಮತ್ತು ಸಾಮಾಜಿಕ ವಿಚಾರಗಳನ್ನು ಒಳಗೊಂಡ ಕಾವ್ಯವಾಗಿದೆ. ರಾಮಾಯಣ ಕಾವ್ಯ ಹಲವು ವೈಶಿಷ್ಟ್ಯಗಳಿಂದ ಶತಶತಮಾನಗಳಿಂದ ಜನಪ್ರಿಯ ಕಾವ್ಯವಾಗಿದೆ. ವಾಲ್ಮೀಕಿ ಅವರು ಕವಿಗಳಿಗೆ ಸಾರ್ವಭೌಮ ಆಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಕೋಶಾಧ್ಯಕ್ಷ ನಂ.ಮಹಾದೇವ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿ ಸಫೀರ್, ಭಾರತ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ವೆಂಕಟರಾಜು, ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಎಂ.ರಾಮಕೃಷ್ಣ, ಮುನಿರತ್ನಮ್ಮ ಮುಂತಾದವರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು