LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

`ರೈತರು ಹೆಚ್ಚಿನ ರೀತಿಯಲ್ಲಿ ಸಹಕರಿಸಿದರೆ ಸಹಕಾರಿ ಸಂಘ ಅಭಿವೃದ್ಧಿಯಾಗುತ್ತದೆ’

ಚನ್ನರಾಯಪಟ್ಟಣ: ರೈತರು ಗ್ರಾಮೀಣ ಕೃಷಿ ಸಹಕಾರ ಸಂಘದಲ್ಲಿ ವ್ಯವಹರಿಸಿ ಸಹಕಾರ ನೀಡಿದರೆ ಸಂಘ ಇನ್ನಷ್ಟು ಅಭಿವೃದ್ಧಿ ಆಗುತ್ತದೆ ಎಂದು ಜೀಪಂ ಮಾಜಿ ಸದಸ್ಯ ಸಹಕಾರ ರತ್ನ ಪುರಸ್ಕೃತ ಜಿ ಲಕ್ಷ್ಮೀನಾರಾಯಣ್ ಹೇಳಿದರು.

ದೇವನಹಳ್ಳಿ ತಾಲೂಕು, ಚನ್ನರಾಯಪಟ್ಟಣ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2023 24ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘದಲ್ಲಿ ಪ್ರತಿಯೊಂದು ಕಸಬುದಾರರಿಗೂ ರೈತರಿಗೆ ಸಾಲ ಸೌಲಭ್ಯ ಸಿಗುತ್ತದೆ ರೈತರು ರಾಸಾಯನಿಕ ಗೊಬ್ಬರ ಎಲ್ಲವವನ್ನು ರೈತರು ವ್ಯವಹಾರಿಸಬೇಕು ಹೆಚ್ಚಿನ ರೀತಿಯಲ್ಲಿ ಸದಸ್ಯರು ಸಹಕಾರ ನೀಡಿದರೆ ಸಂಘ ಇನ್ನಷ್ಟು ಬಲಿಷ್ಠವಾಗುತ್ತದೆ ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದರು.

ಸಂಘದ ಅಧ್ಯಕ್ಷ ಎಚ್ ಆರ್ ಮುರಳಿ ಮಾತನಾಡಿ ನಮ್ಮ ಸಂಘದಲ್ಲಿ ಎಲ್ಲಾ ಸದಸ್ಯರು ಹಣವನ್ನು ಠೇವಣಿ ಇಟ್ಟರೆ ಅದರ ಪ್ರಕಾರ ಬಡ್ಡಿ ಸಿಗುತ್ತದೆ ಸಂಘವು ಇನ್ನಷ್ಟು ಅಭಿವೃದ್ಧಿಯಾಗುತ್ತದೆ ಎಂದರುಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕ ಎಂ ರಮೇಶ್ ಮಾತನಾಡಿ ಚನ್ನರಾಯಪಟ್ಟಣ ವಿಧೋದ್ದೇಶ ಸಂಘವು ಹೋಬಳಿ ಮಟ್ಟದಲ್ಲಿ ಇರುವುದರಿಂದ ಪಕ್ಕದಲ್ಲಿ ಕೈಗಾರಿಕಾ ಪ್ರದೇಶ ಆಗುತ್ತಿರುವುದರಿಂದ ರೈತರು ಹೆಚ್ಚಿನ ಠೇವಣಿ ಹಣ ಇಟ್ಟರೆ ಸಂಘವು ಅಭಿವೃದ್ಧಿಯಾಗುತ್ತದೆ ಸಂಘಕ್ಕೆ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಬರುವ ಅನುದಾನ ನೀಡುತ್ತೇವೆ ಅದನ್ನು ಬಳಸಿಕೊಂಡು ಸಂಘ ಅಭಿವೃದ್ಧಿ ಮಾಡಿಕೊಂಡರೆ ರೈತರಿಗೆ ಹೆಚ್ಚು ಅನುಕೂಲ ಸಿಗುತ್ತದೆ ಎಂದರು.

ಈ ಸಂದರ್ಭದಲ್ಲಿ ತಾಪಂ ಮಾಜಿ ಸದಸ್ಯ ವೆಂಕಟೇಶ್ ಗ್ರಾಪಂ ಅಧ್ಯಕ್ಷ ಮರೇಗೌಡ ಸಂಘದ ಉಪಾಧ್ಯಕ್ಷ ಡಿ ಕೃಷ್ಣಪ್ಪ ನಿರ್ದೇಶಕರುಗಳಾದ ಎ ನಂಜೇಗೌಡ ಸಿಎಂ ವಸಂತ್ ಎನ್ ಪಿಳ್ಳೆ ಗೌಡ ಬಿ ಎಂ ಮುನಿಕೃಷ್ಣಪ್ಪ ಟಿ ರಾಜಣ್ಣ ಎಚ್ ಡಿ ದೇವರಾಜ್ ಟಿ ನಾಗರಾಜ್ ಕಲಾ ವೆಂಕಟೇಶ್ ಮಂಜುಳಾ ಬಿಡಿ ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ಪ್ರಕಾಶ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್ ವಿ ನಾರಾಯಣಸ್ವಾಮಿ ಗುಮಾಸ್ತ ಮುನಿರಾಜ್ ಇನ್ನು ಮುಂತಾದವರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು