LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ರೈತರ ಜಮೀನನ್ನು ಕಬಳಿಸಲು ಹೊರಟಿರುವ ವಕ್ಫ್ ಮಂಡಳಿಯ ಕೃತ್ಯವನ್ನು ಖಂಡಿಸಿ: ಶಿವಕುಮಾರ್ ಆರಾಧ್ಯ ದಲಿತ, ಶೋಷಿತ, ರೈತರ ಸಾರ್ವಜನಿಕರ ಭೂಮಿಯನ್ನು ಉಳಿಸಲು ರೈತ ಘರ್ಜನಾ ರ್ಯಾಲಿ

ದೇವನಹಳ್ಳಿ: ರೈತರ ಜಮೀನನ್ನು ಕಾನೂನಿನ ಮೂಲಕ ಕಬಳಿಸಲು ಹೊರಟಿರುವ ವಕ್ಫ್ ಮಂಡಳಿಯ ಕೃತ್ಯವನ್ನು ರಾಜ್ಯದ ರೈತರು ಮತ್ತು ಸಾರ್ವಜನಿಕರು ತೀವ್ರವಾಗಿ ವಿರೋಧಿಸಿ ಖಂಡಿಸಬೇಕಾಗಿದೆ ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶದ ತಾಲೂಕು ಅಧ್ಯಕ್ಷ ಶಿವಕುಮಾರ್ ಆರಾಧ್ಯ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶದ(ರಿ) ವತಿಯಿಂದ ನ. 26 ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ದಲಿತ, ಶೋಷಿತ, ರೈತರ ಸಾರ್ವಜನಿಕರ ಭೂಮಿಯನ್ನು ಉಳಿಸಲು ಬೃಹತ್ ರೈತ ಘರ್ಜನಾ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮಠ, ಮಂದಿರಗಳ ಸಾವಿರಾರು ವರ್ಷಗಳ ಭೂಮಿಯನ್ನು ಘೋಷಿಸಿ ದುಷ್ಟತನವನ್ನು ಮೆರೆದಿರುವ ಸರ್ಕಾರದ ನಿಲುವನ್ನು ವಿರೋಧಿಸಿ ರಾಜ್ಯದಲ್ಲಿ ರೈತರ ಸ್ವಾಭಿಮಾನ ಬದುಕಿಗೆ ಕೊಳ್ಳಿ ಇಡಲು ಹೊರಟಿರುವ ಕರಾಳ ವಕ್ಫ್ ಕಾಯ್ದೆ ರದ್ದು ಪಡಿಸಲು ಆಗ್ರಹಿಸೋಣ ಕಬಳಿಸಿದ ಭೂಮಿಯನ್ನು ಉಳಿಸಿಕೊಳ್ಳಲು ಪಣತೊಡೋಣ ಸಾವಿರ ಸಂಖ್ಯೆಯಲ್ಲಿ ರೈತರು ಜನರು ಸ್ವಇಚ್ಛೆಯಿಂದ ಸೇರಿ ದುಷ್ಟ ಶಕ್ತಿಗಳ ವಿರುದ್ಧ ಘರ್ಜಿಸೋಣ ಬನ್ನಿ ಎಲ್ಲರೂ ಒಂದಾಗಿ ಪ್ರತಿಭಟಿಸೋಣ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶದ ಜಿಲ್ಲಾಧ್ಯಕ್ಷ ನಾಗರಾಜಯ್ಯ, ಕಾರ್ಯದರ್ಶಿ ಎಂ. ಶಶಿಧರ್, ತಾಲೂಕು ಸಮಿತಿಯ ಸದಸ್ಯರಾದ ಎಸ್ .ಮಂಜುನಾಥ್, ಎಂ ಅಂಜಿನಪ್ಪ, ಮಹಿಳಾ ಪ್ರಮುಖ ನೇತ್ರಾವತಿ, ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಅನಿಲ್ ಕುಮಾರ್, ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು