LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

`ರೈತ, ಯುವಕರ ಶ್ರೇಯಸ್ಸಿಗೆ ವಿಶೇಷ ಪೂಜೆ’

ಶಿಡ್ಲಘಟ್ಟ: “ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜ ಸೇವೆ ಮಾಡಲೆಂದು ಬಂದೆ. ಜನರ ಸಹಕಾರದಿಂದ ಚುನಾವಣೆಗೆ ನಿಂತು ಜನರು ನಾಡಿ ಮಿಡಿತ ಅರಿತುಕೊಂಡಿದ್ದೇನೆ.ರೈತರು, ಯುವಕರು ಮತ್ತು ಬಡವರ ಶ್ರೇಯಸ್ಸಿಗೆ ಸತ್ಯನಾರಾಯಣ ಸ್ವಾಮಿ ಪೂಜೆ ಮಾಡಿ, ಕ್ಷೇತ್ರದ ಅಭಿವೃದ್ಧಿಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಪುಟ್ಟು ಆಂಜನಪ್ಪ ತಿಳಿಸಿದರು.

ಅವರು ನಿನ್ನೆ ಅಜ್ಜ ಕದಿರೇನಹಳ್ಳಿ ತಮ್ಮ ನಿವಾಸದಲ್ಲಿ ಗುರುಪೂರ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ಸತ್ಯನಾರಾಯಣ ಸ್ವಾಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಆಶೋತ್ತರಗಳಿಗೆ ತಕ್ಕಂತೆ ಆಡಳಿತ ನಡೆಸುತ್ತಿದೆ. ಶಿಡ್ಲಘಟ್ಟ ತಾಲೂಕಿಗೆ ಉತ್ತಮ ಭವಿಷ್ಯವಿದೆ.

ರಾಜ್ಯ ಸರ್ಕಾರ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಮುಂದಾಗಿದೆ. ಇದರಿಂದ ರೈತರು ತಮ್ಮ ಜಮೀನುಗಳನ್ನು ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದರೂ, ಸ್ಥಾಪನೆಯಾಗಲಿರುವ ಕೈಗಾರಿಕಾ ಪ್ರದೇಶಗಳಿಂದ ಹೆಚ್ಚು ಉದ್ಯೋಗಗಳ ಸೃಷ್ಟಿಯಾಗಲಿದೆ. ರಾಜಧಾನಿಗೆ ಸಮೀಪವಿರುವ ಶಿಡ್ಲಘಟ್ಟ ಭವಿಷ್ಯದಲ್ಲಿ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ ಹೊಂದಲಿದೆ ಎಂದು ಪುಟ್ಟು ಆಂಜನಪ್ಪ ತಿಳಿಸಿದರು.

ರಾಜ್ಯದಲ್ಲಿ ಮಳೆ ವಿಪರೀತವಾಗಿ ಆಗುತ್ತಿದೆ. ಇದರಿಂದ ಸ್ವಲ್ಪಮಟ್ಟಿನ ಅನಾಹುತಗಳು ಸೃಷ್ಟಿಯಾಗಿ ರೈತರು ಆತಂಕದಲ್ಲಿದ್ದಾರೆ. ಪ್ರಕೃತಿಯ ಜೊತೆಗೆ ಬದುಕು ಕಟ್ಟಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಹಿಂದಿನ ಕಾಲದಲ್ಲಿ ಕೇವಲ ಆಹಾರಧಾನ್ಯಗಳನ್ನು ಉತ್ಪಾದಿಸುವ ಮೂಲಕ ರೈತಾಪಿ ಜನರು ನೆಮ್ಮದಿಯಾಗಿ ಜೀವನ ಸಾಗಿಸುತ್ತಿದ್ದರು.

ಆದರೆ ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ವಾಣಿಜ್ಯ ಬೆಳೆಗಳನ್ನು ಅತಿ ಹೆಚ್ಚು ಬೆಳೆಯುವ ಮೂಲಕ ಆಹಾರ ಬೆಳೆಗಳನ್ನು ಬೆಳೆಯುವುದು ಕಡಿಮೆ ಮಾಡಿದ್ದಾರೆ. ನಮ್ಮ ಆಸೆ ಆಕಾಂಕ್ಷೆಗಳನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಹಿರಿಯರನ್ನು ಗೌರವಿಸುವ ಮತ್ತು ಪ್ರಕೃತಿಯನ್ನು ಆರಾಧಿಸುವ ಮನೋಭಾವ ಪ್ರತಿ ಒಬ್ಬರಲ್ಲೂ ಮೂಡಬೇಕಿದೆ ಎಂದು ಪುಟ್ಟು ಆಂಜನಪ್ಪ ತಿಳಿಸಿದರು. ಗುರುಪೂರ್ಣಿಮೆಯ ಈ ದಿನ ಎಲ್ಲರೊಂದಿಗೂ ಸಹಭೋಜನ ಮಾಡುವ ಮೂಲಕ ನನ್ನ ಕೃತಜ್ಞತೆಗಳನ್ನು ಕ್ಷೇತ್ರದ ಜನರಿಗೆ ಅರ್ಪಿಸಿದ್ದೇನೆ ಎಂದು ಅವರು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು