LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಲಾಠಿ ಚಾರ್ಜ್ ಬಿಸಿ ವಿಧಾನಸಭೆಯಲ್ಲಿ ಪಂಚಮಸಾಲಿ ಹೋರಾಟದ ಪ್ರತಿಧ್ವನಿ

ಬೆಳಗಾವಿ: ಪಂಚಮಸಾಲಿ ಸಮುದಾಯದ ಹೋರಾಟದ ಮೇಲೆ ನಡೆದ ಲಾಠಿ ಚಾರ್ಜ್ ಪ್ರಕರಣ ಇಂದು ವಿಧಾನಸಭೆ ಕಲಾಪದ ಆರಂಭದಲ್ಲೆ ಪ್ರತಿಧ್ವನಿಸಿ ವಿಪಕ್ಷ ಬಿಜೆಪಿ ಸದಸ್ಯರು ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರಸಂಗ ನಡೆಯಿತು.ಇಂದು ಸದನದ ಕಲಾಪ ನಿಗದಿತ ಸಮಯಕ್ಕಿಂತ ಮುಕ್ಕಾಲು ಗಂಟೆ ತಡವಾಗಿ ಆರಂಭವಾಯಿತು.

ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಮಂಗಳವಾರ ಪಂಚಮ ಸಾಲಿ ಸಮುದಾಯದವರು ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆಸಿ ಅಮಾನುಷವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗತೊಡಗಿದರು.

ಇದೊಂದು ಗೂಂಡಾ ಸರ್ಕಾರ, ಮಾನವೀಯತೆಯಿಲ್ಲದ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ಜೋರಾಗಿ ಘೋಷಣೆ ಕೂಗತೊಡಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಇಬ್ಬರು ಮಾಜಿ ಶಾಸಕರು ನಮಗಿನ್ನ ಮುಂಚೆ ಸದನಕ್ಕೆ ಬಂದಿದ್ದವರು ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಂತಾಪ ಸೂಚಿಸಿ ಅವರ ಕುಟುಂಬದವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ. ಮೃತರಿಗೆ ಸಂತಾಪ ಸೂಚಿಸಿದ ನಂತರ ನೀವು ಬೇಕಾದರೆ ಬೊಬ್ಬೆ ಹೊಡೆಯಿರಿ, ಪ್ರತಿಭಟನೆ ಮಾಡಿ ಎಂದು ಪ್ರತಿಭಟನಾಕಾರರನ್ನುದ್ದೇಶಿ ಮಾತನಾಡಿದರು.

ಒಂದು ಹಂತದಲ್ಲಿ ಬಿಜೆಪಿಯವರ ಪ್ರತಿಭಟನೆಯ ಕೂಗು ಜೋರಾಗಿತ್ತಾದರೂ ಸಭಾಧ್ಯಕ್ಷರ ಮಾತುಗಳ ಆಲಿಸಿ ಸಂತಾಪ ಸೂಚಕದ ನಿರ್ಣಯದ ಗಂಭೀರತೆಯನ್ನು ಅರಿತು ತಮ್ಮ ಘೋಷಣೆಗಳನ್ನು ನಿಲ್ಲಿಸಿ ತಮ್ಮ ತಮ್ಮ ಆಸನಗಳಲ್ಲಿ ಆಸಿನರಾದರು.ನಂತರ ಸಭಾಧ್ಯಕ್ಷರು ಇತ್ತೀಚೆಗೆ ನಿಧನರಾದ ಕೊಳ್ಳೆಗಾಲದ ಮಾಜಿ ಶಾಸಕ ಎಸ್.ಜಯಣ್ಣ ಹಾಗೂ ಇಂದು ನಿಧನರಾಗಿರುವ ಬೆಳ್ಳಾವಿ ಕ್ಷೇತ್ರದ ಮಾಜಿಶಾಸಕ ಆರ್. ನಾರಾಯಣ್ ರವರ ನಿಧನಕ್ಕೆ ಸಂತಾಪ ನಿರ್ಣಯ ಮಂಡಿಸಿ ಮೃತರಿಬ್ಬರ ಸೇವಾ ಕಾರ್ಯಗಳನ್ನು ಸದನಕ್ಕೆ ವಿವರಿಸಿದರು.ಈ ಸಂದರ್ಭದಲ್ಲಿ ಸಭಾಧ್ಯಕ್ಷರ ನಿರ್ಣಯ ಪರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮೃತ ಶಾಸಕರಿಬ್ಬರ ಬಗ್ಗೆ ಮಾತನಾಡಿ ಅವರ ಸೇವಾ ಕಾರ್ಯಗಳನ್ನು ಸ್ಮರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು