LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ: ಉದ್ಯೋಗ ಅರಸಿ ತೆರಳುವವರಿಗೆ ಇನ್ನು ಮುಂದೆ ಯಾವುದೇ ನಿರ್ಬಂಧವಿಲ್ಲ..!

ಬೆಂಗಳೂರು: ಇಸಿಸ್ ಉಗ್ರರು ಮತ್ತು ಲಿಬಿಯಾ ಸರ್ಕಾರ ನಡುವಿನ ಆಂತರಿಕ ಕಲಹ ನಿಯಂತ್ರಣಕ್ಕೆ ಬಂದಿರುವುದರಿಂದ ಭಾರತೀಯ ವೀಸಾಗಳ ಮೇಲಿದ್ದ ನಿರ್ಬಂಧಕಾಜ್ಞೆಯನ್ನು ತೆರವುಗೊಳಿಸಲಾಗಿದ್ದು, ಇನ್ನು ಮುಂದೆ ಪ್ರವಾಸಿ (ವಿಸಿಟಿಂಗ್‌) ವೀಸಾ ಹೊರತುಪಡಿಸಿ ಉಳಿದ ಯಾವುದೇ ಮಾದರಿಯ ವೀಸಾ ಮೂಲಕ ಭಾರತೀಯರು ನೇರವಾಗಿ ಲಿಬಿಯಕ್ಕೆ ತೆರಳಬಹುದು,

ಲಿಬಿಯಾ ಆಂತರಿಕ ಘರ್ಷಣೆಗಳಿಂದಾಗಿ ಭಾರತ ಸರ್ಕಾರವು 2016 ರಲ್ಲಿ ಲಿಬಿಯಾಕ್ಕೆ ಪ್ರಯಾಣವನ್ನು ನಿಷೇಧಿಸಿತ್ತು. ಆ ಸಮಯದಲ್ಲಿ ಲಿಬಿಯಾದಲ್ಲಿ ನೆಲೆಸಿದ್ದ ಭಾರತೀಯ ನಾಗರಿಕರನ್ನೂ ಕೂಡ ಸರ್ಕಾರ ಸ್ಥಳಾಂತರಿಸಿತ್ತು. ಇದೀಗ 8 ವರ್ಷಗಳ ನಂತರ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅನುಮತಿ ನೀಡಿದೆ.

ಶುಕ್ರವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು, 2011ರಲ್ಲಿ ಆಂತರಿಕ ರಾಜಕೀಯ ಸಂಘರ್ಷದಿಂದ 18 ಸಾವಿರಕ್ಕೂ ಹೆಚ್ಚು ಭಾರತೀಯರನ್ನು ವಾಪಸ್‌ ಕರೆತರಲಾಗಿತ್ತು. 2014ರಲ್ಲಿ ಐಎಸ್‌ ಉಗ್ರರು ಮತ್ತು ಸರ್ಕಾರದ ನಡುವಿನ ಕಾಳಗದಿಂದ ಇನ್ನೂ ನಾಲ್ಕು ಸಾವಿರ ಭಾರತಿಯರನ್ನು ವಾಪಸ್‌ ಕರೆ ತರಲಾಗಿತ್ತು. 2016ರಲ್ಲಿ ಸರ್ಕಾರ ಮತ್ತು ಉಗ್ರರ ಕಾಳಗದಲ್ಲಿ ಭಾರತ ಮೂಲದ ದಾದಿಯೊಬ್ಬರು ಮೃತಪಟ್ಟ ಕಾರಣ ಲಿಬಿಯಾ ಪ್ರವಾಸಕ್ಕೆ ಭಾರತ ಸರ್ಕಾರ ನಿರ್ಬಂಧ ವಿಧಿಸಿತ್ತು. ಇದೀಗ ಪರಿಸ್ಥಿತಿ ತಿಳಿಯಾಗಿದ್ದು, ಉದ್ಯೋಗ ನಿಮಿತ್ತ ಅಲ್ಲಿ ನೆಲಸುವುದಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.

ಇತರ ಸಂಘಟನೆಗಳ ನಿರಂತರ ಪ್ರಯತ್ನದ ನಂತರ ನಿಷೇಧವನ್ನು ಹಿಂತೆಗೆದುಕೊಳ್ಳಲಾಗಿದೆ. ಮೂರು ತಿಂಗಳ ಹಿಂದೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ನಿಷೇಧವನ್ನು ತೆಗೆದುಹಾಕಿಗೆ, ಇದು ಭಾರತೀಯ ನಾಗರಿಕರಿಗೆ, ವಿಶೇಷವಾಗಿ ಕನ್ನಡಿಗರಿಗೆ ಸಂತಸವನ್ನು ತಂದಿದೆ.

ನಿಷೇಧವನ್ನು ಹೇರಿದ ನಂತರ ಲಿಬಿಯಾದಿಂದ ಸ್ಥಳಾಂತರಗೊಂಡ ಸಾಕಷ್ಟು ಜನರು ಉದ್ಯೋಗಗಳು ಸಿಗದೆ ತಮ್ಮ ಜೀವನವನ್ನು ಪುನರ್ನಿರ್ಮಿಸಿಕೊಳ್ಳಲು ಹೆಣಗಾಡಿದರು. ಲಿಬಿಯಾದಲ್ಲಿ ಪರಿಸ್ಥಿತಿ ಸ್ಥಿರವಾದ ನಂತರ, ಹಲವಾರು ಜನರು ಮಲೇಷ್ಯಾ ಮತ್ತು ಬಾಂಗ್ಲಾದೇಶದ ಮೂಲಕ ಲಿಬಿಯಾಕ್ಕೆ ಪ್ರಯಾಣಿಸಿದರು. ಆದರೆ, ಭಾರತದಿಂದ ನೇರವಾಗಿ ಪ್ರಯಾಣವನ್ನು ನಿಲ್ಲಿಸಲಾಯಿತು. ಈಗ ಆ ನಿಷೇಧವನ್ನು ತೆಗೆದು ಹಾಕಲಾಗಿದ್ದು, ಜನರು ಭಾರತದಿಂದ ನೇರವಾಗಿ ಲಿಬಿಯಾಕ್ಕೆ ಪ್ರಯಾಣಿಸಬಹುದು ಎಂದು ತಿಳಿಸಿದರು.

ಕರ್ನಾಟಕ ಮೂಲದ ಅನಿವಾಸಿ ಭಾರತೀಯ ಪೆಟ್ರೋಲಿಯಂ ಉತ್ಪನ್ನ ಕಂಪೆನಿಯ ಹಿರಿಯ ತಜ್ಞ ರಾಜರಾಂ ಮಾತನಾಡಿ, ಲಿಬಿಯಾಕ್ಕೆ ತೆರಳುವ ಪ್ರಯಾಣ ನಿರ್ಬಂಧವನ್ನು ತೆರವುಗೊಳಿಸಲು ಸುಮಾರು ವರ್ಷಗಳಿಂದ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆದರೆ ಡಾ.ಆರತಿ ಕೃಷ್ಣರವನ್ನು ಸಂಪರ್ಕಿಸಿ ಮನವಿ ಮಾಡಿದ ಒಂದು ತಿಂಗಳೊಳಗೆ ಪ್ರಯಾಣ ನಿರ್ಬಂಧವನ್ನು ತೆರವುಗೊಳಿಸಿರುವುದಕ್ಕೆ ಅಭಿನಂದನೆಗಳು ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು