LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಕ್ಫ್ ವಿರುದ್ಧ ಸಿಡಿದೆದ್ದ BJP: 'ನಮ್ಮ ಭೂಮಿ, ನಮ್ಮ ಹಕ್ಕು' ಘೋಷಣೆಯಡಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭ

ಬೆಂಗಳೂರು: ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ಆರಂಭಿಸಿದೆ.

ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ.

ಶುಕ್ರವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ ರೈತರ ಬದುಕಿಗೆ ಕೊಳ್ಳೆ ಇಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧಿಕ್ಕಾರ, ಮಠ, ಮಂದಿರ, ಅನ್ನದಾತರ ಜಾಗಕ್ಕೂ ಬೇಲಿ ಹಾಕಿದ ವಕ್ಫ್ ಗೆ ಧಿಕ್ಕಾರ ಎನ್ನುವ ಬಿತ್ತಿ ಫಲಕಗಳನ್ನು ಪ್ರದರ್ಶಿಸಿದರು. ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ಡಿಸಿ ಕಚೇರಿ ಎದುರಿನ ರಸ್ತೆಯಲ್ಲಿ ಧರಣಿ ಹಮ್ಮಿಕೊಂಡರು.

ಅಶೋಕ ಮಾತನಾಡಿ, ವಕ್ಫ್ ಬೋರ್ಡ್ ನೋಟೀಸ್ ಜಾರಿ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜನ ದಂಗೆ ಏಳುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನವಾಗಿದ್ದಾರೆ. ಸಣ್ಣ ರೈತರ ಜಮೀನುಗಳನ್ನು ಕಿತ್ತುಕೊಳ್ಳುವುದು ಅವರಿಗೆ ಸಾಮಾನ್ಯ ಸಮಸ್ಯೆಯಾಗಿದೆ ಎಂದು ಕಿಡಿಕಾರಿದರು.

ಸರ್ಕಾರ ಆರೋಪವನ್ನು ನಿರಾಕರಿಸುತ್ತಿದೆ, ಆದರೆ, ರೈತರು, ಮಠಾಧೀಶರು ಮತ್ತು ಜನರೇ ಕೆ ಪ್ರತಿಭಟನೆಗೆ ಬರುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಪಸಂಖ್ಯಾತ ಸಮುದಾಯದವರನ್ನು ಓಲೈಸುವ ಕಾರ್ಯದಲ್ಲಿ ನಿರತವಾಗಿದೆ, ಸಮಾಜ ವಿರೋಧಿ ಚಟುವಟಿಕೆಗಳೂ ಹೆಚ್ಚಾಗಿವೆ. ಬಿಜೆಪಿ ಆಡಳಿತದಲ್ಲಿ ನಿಯಂತ್ರಣದಲ್ಲಿದ್ದ ನಕ್ಸಲ್ ಚಟುವಟಿಕೆಗಳು ಕರ್ನಾಟಕದಲ್ಲಿ ಮತ್ತೆ ಆರಂಭವಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವುದು ನಕ್ಸಲ್ ಚಟುವಟಿಕೆ ಮತ್ತು 'ಲವ್ ಜಿಹಾದ್'ನಲ್ಲಿ ತೊಡಗಿರುವವರಿಗೆ ಉತ್ತಮ ವಾತಾವರಣ ನಿರ್ಮಾಣವಾದಂತಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ವಕ್ಫ್ ಮಂಡಳಿಯು 400 ವರ್ಷಗಳಷ್ಟು ಹಳೆಯದಾದ ದೇವಾಲಯದ ಮೇಲೆ ಹಕ್ಕು ಸಾಧಿಸಿದೆ ಎಂದು ವಾಗ್ದಾಳಿ ನಡೆಸಿದರು.

ಬಳಿಕ ಮಾತನಾಡಿದ ಶೋಭಾ ಕರಂದ್ಲಾಜೆಯವರು, ಸ್ವಾತಂತ್ರ್ಯ ಪೂರ್ವದಲ್ಲಿ ಕೇವಲ 10,000ಗಳಷ್ಟಿದ್ದ ವಕ್ಫ್ ಆಸ್ತಿಗಳು, ಈಗ 9.5 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು