LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

`ವಕ್ಫ್ ವಿವಾದ ಆಡಳಿತ ವ್ಯವಸ್ಥೆ ಕೈವಾಡ'

ಹುಬ್ಬಳ್ಳಿ: ಆಡಳಿತ ವ್ಯವಸ್ಥೆಯ ಕೈವಾಡ ಇಲ್ಲದೆ ಈ ರೀತಿ ಎಲ್ಲ ಆಗಲು ಸಾಧ್ಯವಿಲ್ಲ, ರಾಜ್ಯ ಸರ್ಕಾರದ ಸೂಚನೆಯ ಮೇರೆಗೇ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ ಎಂಬುದಾಗಿ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಆರೋಪಿಸಿದರು. ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬAಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರಾಗಿರುವ ಅವರು ಹುಬ್ಬಳ್ಳಿಗೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಕೇಂದ್ರ ಸಚಿವ ವಿ. ಸೋಮಣ್ಣ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಪಾಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ರೈತರು ಹಾಗೂ ವಿವಿಧ ಸಂಘಟನೆಗಳಿAದ ಮನವಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, ರೈತರ ಜಮೀನು, ದೇಗುಲ, ಪಾರಂಪರಿಕ ತಾಣಗಳ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ೧೦-೧೫ ರೈತರ ನಿಯೋಗ ಮನವಿ ಸಲ್ಲಿಸುವ ನಿರೀಕ್ಷೆ ಇತ್ತು. ಆದರೆ, ೭೦ಕ್ಕೂ ಹೆಚ್ಚು ಅಹವಾಲು ಬಂದಿದೆ ಎಂದರು.
ಆಡಳಿತ ವ್ಯವಸ್ಥೆಯ ಕೈವಾಡ ಇಲ್ಲದೆ ಇದೆಲ್ಲ ಆಗಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಸೂಚನೆಯಂತೆ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಈಗ ರೈತರಿಗೆ ಕೊಟ್ಟ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ರಾಜ್ಯ ಸರ್ಕಾರದ ಕೈವಾಡ ಇಲ್ಲದೆ ಆಸ್ತಿ ಕಬಳಿಸಲು ಸಾಧ್ಯವಿಲ್ಲ. ಸರ್ಕಾರದ ಸೂಚನೆ ಇಲ್ಲದೆ ಅಧಿಕಾರಿಗಳು ಹೇಗೆ ಕೆಲಸ ಮಾಡ್ತಾರೆ ಇದು ಅತ್ಯಂತ ಗಂಭೀರವಾದ ವಿಚಾರ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ ವರದಿ ತಯಾರಿಸುತ್ತೇವೆ ಎಂದೂ ಜಗದಾಂಬಿಕಾ ಪಾಲ್ ಹೇಳಿದರು.
ಮತ್ತೊಂದೆಡೆ, ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ರೈತರ ಆಸ್ತಿ ದಾಖಲೆಗಳಲ್ಲಿ ವಕ್ಫ್ ಹೆಸರು ನಮೂದಿಸಲು ಸುತ್ತೋಲೆ ಹೊರಡಿಸಲಾಗಿತ್ತು ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ಮಧ್ಯೆ, ಜಗದಾಂಬಿಕಾ ಪಾಲ್ ನೇರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು