LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ವಯನಾಡಿಗೆ 100 ಮನೆ : ಸಿಎಂ ವಿರುದ್ಧ ಸಿ.ಟಿ.ರವಿ ಕಿಡಿ

ಚಿಕ್ಕಮಗಳೂರು: ಕೇರಳದ ವಯನಾಡಿಗೆ 100 ಮನೆಗಳನ್ನು ನೀಡಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯನವರ ನಡೆ, ರಾಜಕೀಯ ಗುಲಾಮಗಿರಿಯ ಸಂಕೇತ ಎಂದು ಮಾಜಿ ಸಚಿವ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.‌

ನಗರದ ಬೋಳರಾಮೇಶ್ವರ ದೇಗುಲದ ಬಳಿ ದತ್ತಜಯಂತಿಯ ಮೊದಲ ದಿನದ ಅನುಸೂಯ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯನವರು ಕೇರಳದ ವಯನಾಡಿನಲ್ಲಿ 100 ಮನೆ ಕಟ್ಟಿಸಿ ಕೊಡುತ್ತೇವೆ ಎಂದು ಪತ್ರ ಬರೆದಿರುವ ವಿಚಾರವಾಗಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಇಡೀ ಅಖಂಡ ಭಾರತ ಒಂದು. ಇಡೀ ವಿಶ್ವವೇ ಒಂದು ಮನೆ ಎಂಬ ಉದಾತ್ತ ಮನೋಭಾವನೆ ಹೊಂದಿರುವವರು ನಾವು. ಅಕ್ಕಪಕ್ಕದವರಿಗೆ ಸಹಾಯ ಮಾಡುವುದು ತಪ್ಪಲ್ಲ. ಆದರೆ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಪ್ರತಿನಿಧಿಸುವ ಕ್ಷೇತ್ರ ಎಂದು ಜಿಲ್ಲೆಗೆ ಮಾತ್ರ ಈ ರೀತಿ ಮನೆ ನೀಡಲು ಮುಂದಾಗಿರುವುದು ರಾಜಕೀಯ ಗುಲಾಮಗಿರಿಯ ಸಂಕೇತವಾಗಿದೆ ಎಂದು ಅವರು ಕುಟುಕಿದ್ದಾರೆ.

ರಾಜ್ಯದ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಇಲ್ಲಿಯ ಸಂತ್ರಸ್ತರು ಬೀದಿಯಲ್ಲಿದ್ದಾರೆ. ಇಲ್ಲಿಯವರನ್ನು ಬಿಟ್ಟು ಅಲ್ಲಿಯವರಿಗೆ ಸಹಾಯ ಮಾಡುವುದು ರಾಜಕೀಯದ ಗುಲಾಮಗಿರಿ.‌ ಕನ್ನಡಿಗರ ಕಷ್ಟಕ್ಕೆ ಸ್ಪಂದಿಸದೆ, ಕನ್ನಡಿಗರ ತೆರಿಗೆ ಹಣವನ್ನು ಅಲ್ಲಿ ವಿನಿಯೋಗಿಸುವುದು ಎಷ್ಟರ ಮಟ್ಟಿಗೆ ಸರಿ? ರಾಜ್ಯದ ಜನರ ಸಂಕಷ್ಟಗಳನ್ನ ಕಡೆಗಣಿಸಿ ಖರ್ಚು ಮಾಡುವುದು ಸೂಕ್ತವಾದ ನಡವಳಿಕೆ ಅಲ್ಲ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು